ಕ್ರೀಡಾ ಸುದ್ದಿ

ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಅಫ್ಘಾನಿಸ್ತಾನದ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ಭಾರತ ತಂಡ

ನವದೆಹಲಿ : ಭಾರತ ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಅಫ್ಘಾನಿಸ್ತಾನದ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದೆ.

Advertisement
Advertisement
Advertisement

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಅಫ್ಘಾನಿಸ್ತಾನ 8 ವಿಕೆಟ್‌ ನಷ್ಟಕ್ಕೆ 272 ರನ್‌ ಗಳಿಸಿತು. 273 ರನ್‌ಗಳ ಸವಾಲನ್ನು ಪಡೆದ ಭಾರತ 35 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 273 ರನ್‌ ಹೊಡೆಯುವ ಮೂಲಕ ಗುರಿಯನ್ನು ತಲುಪಿತು.

ಇಶನ್‌ ಕಿಶನ್‌ 47 ರನ್‌ (47 ಎಸೆತ, 5 ಬೌಂಡರಿ, 2 ಸಿಕ್ಸರ್‌) ಹೊಡೆದು ಔಟಾದರೆ ರೋಹಿತ್‌ ಶರ್ಮಾ 131 ರನ್‌ (84 ಎಸೆತ, 16 ಬೌಂಡರಿ, 5 ಸಿಕ್ಸರ್‌) ಹೊಡೆದು ಬೌಲ್ಡ್‌ ಆದರು.

ರೋಹಿತ್‌ ಶರ್ಮಾ ಔಟಾದಾಗ ತಂಡದ ಮೊತ್ತ 205 ರನ್‌ ಆಗಿತ್ತು. ಮುರಿಯದ ಮೂರನೇ ವಿಕೆಟಿಗೆ ವಿರಾಟ್‌ ಕೊಹ್ಲಿ ಮತ್ತು ಶ್ರೇಯಸ್‌ ಅಯ್ಯರ್‌ 56 ಎಸೆತಗಳಲ್ಲಿ 68 ರನ್‌ ಜೊತೆಯಾಟವಾಡುವ ಮೂಲಕ ಗೆಲುವಿನ ದಡ ಸೇರಿಸಿದರು. ವಿರಾಟ್‌ ಕೊಹ್ಲಿ ಔಟಾಗದೇ 55 ರನ್‌ (56 ಎಸೆತ, 6 ಬೌಂಡರಿ), ಶ್ರೇಯಸ್‌ ಐಯ್ಯರ್‌ ಔಟಾಗದೇ 25 ರನ್‌ (23 ಎಸೆತ, 1 ಬೌಂಡರಿ, 1 ಸಿಕ್ಸರ್‌) ಹೊಡೆದರು.

ಅಫ್ಘಾನ್‌ ಪರವಾಗಿ ನಾಯಕ ಹಶ್ಮತುಲ್ಲಾ ಶಾಹಿದಿ 80 ರನ್‌ (88 ಎಸೆತ, 8 ಬೌಂಡರಿ, 1 ಸಿಕ್ಸರ್‌) ಅಜ್ಮತುಲ್ಲಾ ಒಮರ್ಜಾಯ್ 62 ರನ್(69‌ ಎಸೆತ, 2 ಬೌಂಡರಿ, 4 ಸಿಕ್ಸರ್‌) ಹೊಡೆದು ಔಟಾದರು. ಅಫ್ಘಾನಿಸ್ತಾನ 63 ರನ್‌ಗಳಿಗೆ 3 ವಿಕೆಟ್‌ ಕಳೆದುಕೊಂಡಿತ್ತು.

ಭಾರತದ ಪರ ಬುಮ್ರಾ 4 ವಿಕೆಟ್‌, ಹಾರ್ದಿಕ್‌ ಪಾಂಡ್ಯ 2, ಶಾರ್ದೂಲ್‌ ಠಾಕೂರ್‌ ಮತ್ತು ಕುಲದೀಪ್‌ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago