ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧದ ನಡುವೆ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ ಅನ್ನು ಪ್ರಾರಂಭಿಸಲಾಗಿದೆ. ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಂದು ರಾತ್ರಿ ಟೆಲ್ ಅವಿವ್ನ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಲಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಟೆಲ್ ಅವಿವ್ನಿಂದ ದೆಹಲಿಗೆ ಚಾರ್ಟರ್ಡ್ ಫ್ಲೈಟ್ ಅನ್ನು ಕಳುಹಿಸಿರುವುದಾಗಿ ವಿದ್ಯಾರ್ಥಿಗಳಿಗೆ ಮೇಲ್ ಸಂದೇಶ ಕಳುಹಿಸಿದೆ. ಈ ವಿಮಾನ ಇಂದು ಇಸ್ರೇಲ್ ಕಾಲಮಾನ ರಾತ್ರಿ ಸುಮಾರು 9 ಗಂಟೆಗೆ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಲಿದೆ.
ಇಸ್ರೇಲ್ ಮೇಲೆ ಹಮಾಸ್ ಉಗ್ರರು ದಾಳಿ ನಡೆಸಿದ ಬಳಿಕ ಎರಡೂ ಪ್ರದೇಶಗಳಲ್ಲಿ ಯುದ್ಧದ ಸ್ಥಿತಿ ತೀವ್ರಗೊಂಡಿದೆ. ಸಾವಿನ ಸಂಖ್ಯೆ 4,000ಕ್ಕೆ ಹತ್ತಿರವಾಗುತ್ತಿದ್ದಂತೆ ಭಾರತೀಯ ನಾಗರಿಕರನ್ನು ಇಸ್ರೇಲ್ನಿಂದ ಏರ್ಲಿಫ್ಟ್ ಮಾಡಲು ಭಾರತ ಆಪರೇಷನ್ ಅಜಯ್ ಅನ್ನು ಪ್ರಾರಂಭಿಸಿದೆ.