ಕ್ರೀಡಾ ಸುದ್ದಿ

ಆಸ್ಟ್ರೇಲಿಯಾವನ್ನು ಮಣಿಸಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಜಿಗಿದ ದಕ್ಷಿಣ ಆಫ್ರಿಕಾ

ಲಕ್ನೋ: ಆಸ್ಟ್ರೇಲಿಯಾ ವಿಶ್ವಕಪ್‌ ಕ್ರಿಕೆಟ್‌ನ ಎರಡನೇ ಪಂದ್ಯದಲ್ಲೂ ಹೀನಾಯವಾಗಿ ಸೋತಿದೆ. ದಕ್ಷಿಣ ಆಫ್ರಿಕಾ 134 ರನ್‌ಗಳ ಜಯ ಸಾಧಿಸಿ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಜಿಗಿದಿದೆ.

Advertisement
Advertisement
Advertisement

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ದಕ್ಷಿಣ ಆಫ್ರಿಕಾ 7 ವಿಕೆಟ್‌ ನಷ್ಟಕ್ಕೆ 311 ರನ್‌ ಗಳಿಸಿತು. ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ 40.5 ಓವರ್‌ಗಳಲ್ಲಿ 177 ರನ್‌ಗಳಿಗೆ ಸರ್ವಪತನ ಕಂಡಿತು.

ಆಸ್ಟ್ರೇಲಿಯಾ ಆರಂಭದಿಂದಲೇ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿತ್ತು. 70 ರನ್‌ ಗಳಿಸುವಷ್ಟರಲ್ಲಿ ಪ್ರಮುಖ 6 ವಿಕೆಟ್‌ ಕಳೆದುಕೊಂಡಿತ್ತು.

ಕಠಿಣ ಪರಿಸ್ಥಿತಿಯಲ್ಲಿ ಮಾರ್ನಸ್‌ ಲಾಬುಶೇನ್ 46 ರನ್‌ (74 ಎಸೆತ, 3 ಬೌಂಡರಿ), ಮಿಷೆಲ್‌ ಸ್ಟಾರ್ಕ್‌ 27 ರನ್‌ (51 ಎಸೆತ, 3 ಬೌಂಡರಿ), ನಾಯಕ ಪ್ಯಾಟ್‌ ಕಮ್ಮಿನ್ಸ್‌ 22 ರನ್‌(21 ಎಸೆತ, 4 ಬೌಂಡರಿ) ಹೊಡೆದು ಸ್ವಲ್ಪ ಪ್ರತಿರೋಧ ತೋರಿದರು.

ವೇಗದ ಬೌಲರ್‌ ಕಗಿಸೋ ರಬಡಾ 3 ವಿಕೆಟ್‌ ಪಡೆದರೆ ಜನ್‌ಸೆನ್‌, ಕೇಶವ್‌ ಮಹರಾಜ್‌, ತಬ್ರೇಜ್‌ ಶಂಶಿ ತಲಾ 2 ವಿಕೆಟ್‌ ಪಡೆದರು. ಲುಂಗಿ ಎನ್‌ಗಿಡಿ 1 ವಿಕೆಟ್‌ ಕಿತ್ತರು.

ಬ್ಯಾಟಿಂಗ್‌ ಆರಂಭಿಸಿದ ದಕ್ಷಿಣ ಆಫ್ರಿಕಾ ಪರ ಮೊದಲ ವಿಕೆಟಿಗೆ ಕೀಪರ್‌ ಕ್ವಿಂಟನ್‌ ಡಿ ಕಾಕ್‌ ಮತ್ತು ತೆಂಬಾ ಬವುಮಾ 108 ರನ್‌ ಜೊತೆಯಾಟವಾಡುವ ಮೂಲಕ ಭದ್ರ ಇನ್ನಿಂಗ್ಸ್‌ ಕಟ್ಟಿದರು. ಆಡೆನ್‌ ಮ್ಯಾಕ್ರಮ್‌ 56 ರನ್‌ (44 ಎಸೆತ, 7 ಬೌಂಡರಿ, 1 ಸಿಕ್ಸರ್‌) ಹೊಡೆದರೆ ಹೊಡೆದರೆ ಕ್ವಿಂಟನ್‌ ಡಿ ಕಾಕ್‌ ಈ ವಿಶ್ವಕಪ್‌ನಲ್ಲಿ ಎರಡನೇ ಶತಕ ಸಿಡಿಸಿದರು. 109 ರನ್‌( 106 ಎಸೆತ, 8 ಬೌಂಡರಿ, 5 ಸಿಕ್ಸ್‌) ಹೊಡೆದು ತಂಡದ ಮೊತ್ತ 197 ಗಳಿಸಿದ್ದಾಗ ಮೂರನೇಯವರಾಗಿ ಔಟಾದರು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago