ರಾಜ್ಯ

ಬೆಂಗಳೂರಿನಲ್ಲಿ ಐಟಿ ದಾಳಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡರಾತ್ರಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ.

Advertisement
Advertisement
Advertisement

ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಆರ್.ಅಂಬಿಕಾಪತಿ ಹಾಗೂ ಮಾಜಿ ಕಾರ್ಪೊರೇಟರ್ ಅಶ್ವಥಮ್ಮ ಮನೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, 23 ಬಾಕ್ಸ್‍ಗಳಲ್ಲಿದ್ದ 42 ಕೋಟಿ ರೂಪಾಯಿ ಸೀಜ್ ಮಾಡಿದ್ದಾರೆ. ಅಶ್ವಥಮ್ಮ ಅವರು ವಾರ್ಡ್ ನಂಬರ್ 95ರಲ್ಲಿ ಕಾರ್ಪೋರೇಟರ್ ಆಗಿದ್ದು, ಇದೀಗ ಅವರ ಸುಲ್ತಾನ್ ಪಾಳ್ಯದ ಮನೆಯ ಮೇಲೆ ಐಟಿ ದಾಳಿಯಾಗಿದೆ.

ದಾಳಿ ವೇಳೆ ಮನೆಯ ಬೆಡ್‍ರೂಂನಲ್ಲಿ 42 ಕೋಟಿ ಹಣ ಸಿಕ್ಕಿದೆ. ಬಾಕ್ಸ್ ಗಳಲ್ಲಿ ಗರಿ ಗರಿ 500 ರೂಪಾಯಿ ನೋಟಿನ ಕಂತೆಯೇ ಪತ್ತೆಯಾಗಿದೆ. 23 ಬಾಕ್ಸ್ ನಲ್ಲಿ 42 ಕೋಟಿ ಹಣ ಸಿಕ್ಕಿದ್ದು, ಒಂದೊಂದು ಬಾಕ್ಸ್ ಅಲ್ಲೂ 1ಕೋಟಿ 65 ಲಕ್ಷ ಹಣ ಕೂಡಿಡಲಾಗಿತ್ತು. ಜಸ್ಟ್ 1 ಗಂಟೆ ಕಳೆದಿದ್ದರೆ ಹಣದ ಸಮೇತ ಎಸ್ಕೇಪ್ ಆಗುತ್ತಿದ್ದರು. ಕಾರಿನಲ್ಲಿ ತಮಿಳುನಾಡಿಗೆ ಹಣ ಸಾಗಾಟ ಮಾಡಲು ತಯಾರು ಮಾಡಿದ್ದರು.

ಐಟಿ ಅಧಿಕಾರಿಗಳು 42 ಕೋಟಿ ಹಣ ಸೀಜ್ ಮಾಡಿದ್ದು, ಇಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಅಡಿ ಪ್ರಕರಣ ದಾಖಲಿಗೆ ಇಡಿ ತಯಾರಿ ನಡೆಸುತ್ತಿದೆ. ಕೆಲ ದಿನಗಳ ಹಿಂದಷ್ಟೇ ಸಿಎಂ ಭೇಟಿ ಆಗಿ ಬಾಕಿ ಬಿಲ್ ಬಿಡುಗಡೆಗೆ ಮನವಿ ಮಾಡಲಾಗಿತ್ತು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago