ಕರಾವಳಿ

ಸುಳ್ಯ: ಉದ್ಯೋಗದ ಅಮಿಷವೊಡ್ಡಿ ಯುವತಿಯೋರ್ವಳಿಗೆ 13 ಲಕ್ಷ ರೂ. ವಂಚನೆ

ಸುಳ್ಯ : ಉದ್ಯೋಗದ ಅಮಿಷವೊಡ್ಡಿ ಯುವತಿಯೋರ್ವಳಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Advertisement
Advertisement
Advertisement

ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ನಿವಾಸಿಯಾಗಿರುವ ಯುವತಿ ವಂಚನೆಗೊಳಗಾದ ಬಗ್ಗೆ ದೂರು ನೀಡಿದ್ದಾರೆ.

ಅಪರಿಚಿತ ವ್ಯಕ್ತಿ ಜುಲೈ 15ರಂದು ಫೋನ್ ಮಾಡಿದ್ದು ತನ್ನನ್ನು ವಿಸ್ತಾರ ಏರ್ಲೈನ್ಸ್ ಸಿಂಗಾಪುರ ಬ್ರಾಂಚ್, ದೇವನಹಳ್ಳಿ ಬೆಂಗಳೂರು ಸಂಸ್ಥೆಯಿಂದ ಎಂದು ಪರಿಚಯಿಸಿಕೊಂಡಿದ್ದ. ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಖಾಲಿಯಿದ್ದು ಹೆಚ್ಚಿನ ಸಂಬಳ ಹಾಗೂ ಇನ್ನಿತರ ಸೌಲಭ್ಯಗಳು ನೀಡುವುದಾಗಿ ತಿಳಿಸಿದ್ದಾರೆ.ಆದರೆ ಉದ್ಯೋಗ ತೆಗೆಸಿಕೊಡಲು ಹಣದ ಅಗತ್ಯವಿದೆಯೆಂದು ತಿಳಿಸಿದ್ದು ಪದೇ ಪದೇ ಕರೆ ಮಾಡಿ ಹಣ ಕೇಳಿ ಪಡೆದಿದ್ದಾನೆ.

ಒಟ್ಟು ವಿವಿಧ ಹಂತಗಳಲ್ಲಿ 13,00,997 ರೂ. ಗಳನ್ನು ಆನ್ಲೈನ್ ಮೂಲಕ ಪಾವತಿಸಿದ್ದು ಉದ್ಯೋಗ ನೀಡದೇ ಮೋಸ ಮಾಡಿದ್ದಾರೆ ಎಂದು ಮಹಿಳೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಐಪಿಸಿ ಕಲಂ 419, 420 ಮತ್ತು ಐಟಿ ಆಕ್ಟ್ 66 (ಡಿ) ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago