ಕ್ರೀಡಾ ಸುದ್ದಿ

ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ ನ್ಯೂಜಿಲೆಂಡ್‌ಗೆ 8 ವಿಕೆಟ್‌ಗಳ ಭರ್ಜರಿ ಜಯ

ಚೆನ್ನೈ: ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ ನ್ಯೂಜಿಲೆಂಡ್‌ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಸತತ ಮೂರು ಜಯ ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ 6 ಅಂಕ ಸಂಪಾದಿಸುವ ಮೂಲಕ ಮೊದಲ ಸ್ಥಾನಕ್ಕೆ ಏರಿದೆ.

Advertisement
Advertisement
Advertisement

ಟಾಸ್‌ ಸೋತು ಬ್ಯಾಟಿಂಗ್‌ ಆರಂಭಿಸಿದ ಬಾಂಗ್ಲಾದೇಶ 9 ವಿಕೆಟ್‌ ನಷ್ಟಕ್ಕೆ 245 ರನ್‌ ಗಳಿಸಿತು. ಸುಲಭದ ಸವಾಲನ್ನು ಬೆನ್ನಟ್ಟಿದ ನ್ಯೂಜಿಲೆಂಡ್‌ ಇನ್ನೂ 43 ಎಸೆತಗಳು ಬಾಕಿ ಇರುವಂತೆಯೇ 2 ವಿಕೆಟ್‌ ನಷ್ಟಕ್ಕೆ 248 ರನ್‌ ಚಚ್ಚಿ ಗೆಲುವಿನ ನಗೆ ಬೀರಿತು.

ನ್ಯೂಜಿಲೆಂಡ್‌ ಪರವಾಗಿ ಕಾನ್ವೆ 45 ರನ್‌ (59 ಎಸೆತ, 3 ಬೌಂಡರಿ) ಹೊಡೆದು ಔಟಾದರೆ ನಾಯಕ ಕೇನ್‌ ವಿಲಿಯಮ್ಸನ್‌ 78 ರನ್(107‌ ಎಸೆತ, 8 ಬೌಂಡರಿ, 1 ಸಿಕ್ಸರ್‌) ಹೊಡೆದು ಗಾಯಾಳಾಗಿ ನಿವೃತ್ತರಾದರು.

ಡ್ಯಾರೆಲ್‌ ಮಿಷೆಲ್‌ ಔಟಾಗದೇ 89 ರನ್‌ (67 ಎಸೆತ, 6 ಬೌಂಡರಿ, 4 ಸಿಕ್ಸರ್‌) ಹೊಡೆದರೆ ಗ್ಲೇನ್‌ ಫಿಲಿಪ್ಸ್‌ ಔಟಾಗದೇ 16 ರನ್‌ ಹೊಡೆದು ಜಯವನ್ನು ತಂದುಕೊಟ್ಟರು.

ಬಾಂಗ್ಲಾ 56 ರನ್‌ ಗಳಿಸುವಷ್ಟರಲ್ಲಿ ಪ್ರಮುಖ 4 ವಿಕೆಟ್‌ ಕಳೆದುಕೊಂಡಿತ್ತು. ಈ ಹಂತದಲ್ಲಿ ಶಕೀಬ್‌ ಉಲ್‌ ಹಸನ್‌ ಮತ್ತು ಮುಷ್ಫಿಕರ್‌ ರಹೀಂ ಐದನೇ ವಿಕೆಟಿಗೆ 108 ಎಸೆತಗಳಲ್ಲಿ 96 ರನ್‌ ಜೊತೆಯಾಟವಾಡುವ ಮೂಲಕ ತಂಡಕ್ಕೆ ಚೇತರಿಕೆ ನೀಡಿದರು.

ನಾಯಕ ಶಕಿಬುಲ್‌ ಹಸನ್‌ 40 ರನ್‌ (51 ಎಸೆತ, 3 ಬೌಂಡರಿ, 2 ಸಿಕ್ಸರ್)‌, ಮುಷ್ಫಿಕರ್‌ ರಹೀಂ 66 ರನ್‌ (75 ಎಸೆತ, 6 ಬೌಂಡರಿ, 2 ಸಿಕ್ಸರ್‌) ಹೊಡೆದು ಔಟಾದರು.

ಲೂಕಿ ಫರ್ಗ್ಯೂಸನ್‌ 3 ವಿಕೆಟ್‌ ಪಡೆದರೆ ಟ್ರೆಂಟ್‌ ಬೌಲ್ಟ್‌ , ಮ್ಯಾಟ್‌ ಹೆನ್ರಿ ತಲಾ 2 ವಿಕೆಟ್‌ ಪಡೆದರು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago