ಅಂತರಾಷ್ಟ್ರೀಯ

199 ಇಸ್ರೇಲಿ ಪ್ರಜೆಗಳನ್ನು ಒತ್ತೆಯಾಳಾಗಿಟ್ಟುಕೊಂಡ ಹಮಾಸ್ ಬಂಡುಕೋರ ಸಂಘಟನೆ

ಟೆಲ್ ಅವಿವ್: ಹಮಾಸ್ ಬಂಡುಕೋರ ಸಂಘಟನೆ 199 ಜನರನ್ನು ಒತ್ತೆಯಾಳಾಗಿ ಇಟ್ಟುಕೊಂಡಿದೆ ಎಂದು ಇಸ್ರೇಲಿ ಮಿಲಿಟರಿ ವಕ್ತಾರ ಡೇನಿಯಲ್ ಹಗರಿ ಮಾಧ್ಯಮ ಸಭೆಯಲ್ಲಿ ಹೇಳಿದ್ದಾರೆ.

Advertisement
Advertisement
Advertisement

ಅಕ್ಟೋಬರ್ 7ರಂದು ಹಮಾಸ್ ರಾಕೆಟ್ ದಾಳಿ ನಡೆಸಿದ ಬಳಿಕ ಅಕ್ರಮವಾಗಿ ಇಸ್ರೇಲ್ ಗಡಿಯನ್ನು ನುಸುಳಿದೆ. ಇಲ್ಲಿ ಜನರ ಹತ್ಯೆ ಮಾಡುವುದಲ್ಲದೇ ಮಹಿಳೆಯರು ಮಕ್ಕಳು ಸೇರಿದಂತೆ ಇಸ್ರೇಲಿ ಪ್ರಜೆಗಳನ್ನು ಒತ್ತೆಯಾಳಾಗಿ ಇಟ್ಟುಕೊಂಡಿದೆ ಎಂದು ಡೇನಿಯಲ್ ಹಗರಿ ವಿವರಿಸಿದರು.

ಯುದ್ಧ ಆರಂಭವಾದ ಬಳಿಕ ಗುಂಡು ಹಾರಿಸಿ, ಇರಿದು ಮತ್ತು ಸುಟ್ಟು 1,400 ಕ್ಕೂ ಜನರನ್ನು ಹಮಾಸ್ ಹತ್ಯೆ ಮಾಡಿದೆ. ಏಳು ದಿನಗಳ ನಿರಂತರ ಬಾಂಬ್ ದಾಳಿಯು ಹಮಾಸ್ ನೆಲೆಗಳನ್ನು ನಾಶಪಡಿಸಿದೆ. ಎರಡೂ ಕಡೆಗಳಲ್ಲಿ ಒಟ್ಟು 3,000 ಜೀವಗಳನ್ನು ಯುದ್ಧ ಬಲಿ ತೆಗೆದುಕೊಂಡಿದೆ.

ಯುದ್ಧ ಉಲ್ಬಣಗೊಳ್ಳುತ್ತಿದ್ದಂತೆ ಇಸ್ರೇಲಿ ಸೈನ್ಯವು ಗಾಜಾ ಪಟ್ಟಿಯ ಉತ್ತರದಲ್ಲಿ 1.1 ಮಿಲಿಯನ್ ಪ್ಯಾಲೆಸ್ತೀನಿಯಾದವರಿಗೆ ಸ್ಥಳಾಂತರಿಸುವ ಆದೇಶಗಳನ್ನು ನೀಡಿತು. ಅದರ 2.4 ಮಿಲಿಯನ್ ಜನಸಂಖ್ಯೆಯ ಸರಿಸುಮಾರು ಅರ್ಧದಷ್ಟು ಜನರು ತಮ್ಮ ಸುರಕ್ಷತೆಗಾಗಿ ದಕ್ಷಿಣದ ಕಡೆಗೆ ಚಲಿಸುವಂತೆ ಒತ್ತಾಯಿಸಿದೆ ಎಂದರು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago