ಕೊಡಗು: ಕಾವೇರಿಯ ಉಗಮ ಸ್ಥಾನ ತಲಕಾವೇರಿಯ ಕುಂಡಿಕೆಯಲ್ಲಿ ಮೊಗೆದಷ್ಟು ನೀರು ಉತ್ಪತ್ತಿಯಾಗುತ್ತಿರುವುದು ವಿಸ್ಮಯಕಾರಿಯಾಗಿದ್ದು, ಈ ಜೀವಜಲವನ್ನು ಕೊಡಗಿನವರು ಸೇರಿದಂತೆ ಸಹಸ್ರಾರು ಮಂದಿ ಭಕ್ತಿಯಿಂದ ಪೂಜಿಸುತ್ತಾರೆ. ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ.
ಜೀವ ನದಿಯನ್ನ ಕಣ್ತುಂಬಿಸಿಕೊಳ್ಳಲು ಸಹಸ್ರಾರು ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ.ಇಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ತುಲಾ ಲಘ್ನದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ. ಪ್ರಧಾನ ಅರ್ಚಕ ಗುರುರಾಜ್ ಆಚಾರ್ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಈ ಬಾರಿ ಮಧ್ಯ ರಾತ್ರಿ ತೀರ್ಥೋದ್ಭವವಾಗುವುದರಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ.
ವಿಸ್ಮಯಕಾರಿ ಕುಂಡಿಕೆ:
ತಲಕಾವೇರಿಯಲ್ಲಿನ ಕುಂಡಿಕೆಯಲ್ಲಿ ಪ್ರತಿ ವರ್ಷ ಕಾವೇರಿ ತೀರ್ಥ ರೂಪದಲ್ಲಿದರ್ಶನ ನೀಡುತ್ತಾಳೆ ಎನ್ನುವುದು ಪುರಾತನ ಕಾಲದಿಂದಲೂ ಇರುವ ನಂಬಿಕೆ.
ಈ ಸಂದರ್ಭ ಸಹಸ್ರಾರು ಭಕ್ತರು ತೀರ್ಥರೂಪಿಣಿ ಕಾವೇರಿ ತಾಯಿಯನ್ನು ಕಣ್ಣು ತುಂಬಿಕೊಳ್ಳುತ್ತಾರೆ. ಕೇವಲ ಕೊಡಗು ಮಾತ್ರವಲ್ಲದೆ ರಾಜ್ಯದ ಮೂಲೆ ಮೂಲೆಗಳಿಂದ ಹಾಗೂ ತಮಿಳುನಾಡಿನಿಂದಲೂ ಸಾಕಷ್ಟು ಭಕ್ತರು ಆಗಮಿಸಿ ಇಲ್ಲಿಂದ ತೀರ್ಥ ಕೊಂಡೊಯ್ಯುತ್ತಾರೆ. ಇಲ್ಲಿನ ಪುಟ್ಟ ಕುಂಡಿಕೆಯಲ್ಲಿನ ಕಾವೇರಿ ಜಲವನ್ನು ತೀರ್ಥವೆಂದು ನಂಬಿ ಪೂಜಿಸುವುದಲ್ಲದೆ ಮನೆಗೆ ಕೊಂಡೊಯ್ಯುತ್ತಾರೆ. ಈ ಕುಂಡಿಕೆಯನ್ನು ಭಕ್ತಿ ಭಾವದಿಂದ ಕಾಣುತ್ತಾರೆ.
ತಲಕಾವೇರಿಗೆ ಎಲ್ಲರಿಗೂ ಮುಕ್ತ ಪ್ರವೇಶ ಕಲ್ಪಿಸಲಾಗಿದೆ. ಭಕ್ತರಿಗೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…