ಉದ್ಯೋಗ ಮಾಹಿತಿ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್​ ನೇಮಕಾತಿ: ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ 17 ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆ ಭರ್ತಿ ಮಾಡಲಾಗುವುದು. ಆಯಾಯ ಗ್ರಾಮ ಅಥವಾ ತಾಲೂಕು ಪಂಚಾಯಿತಿ ನಿವಾಸಿ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

Advertisement
Advertisement
Advertisement

ಹುದ್ದೆಯ ವಿವರ:

ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ 17 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನಿಸಿರುವ ಗ್ರಾಮಗಳ ಪಟ್ಟಿ ಇಂತಿದೆ. ಅತಿಕಾರಿ ಬೆಟ್ಟು ಇರುವೈಲ್​, ಇರ್ವತ್ತೂರು, ಕಡಿರುದ್ಯಾವರ, ಕಡ್ಯ – ಕೊಣಾಜೆ, ಕೆಯ್ಯೂರು, ನಿಡ್ಪಳ್ಳಿ, ಬಡಗ ಎಡಪದವು, ಮಣಿನಾಲ್ಕೂರು, ಮಲ್ಲೂರು, ಮಾಣಿಲ, ವಾಲ್ಪಾಡಿ, ಸಜಿಪಪಡು, ಸಾಲೆತ್ತೂರು, ಸುಲ್ಕೇರಿ, ಮಾಣಿ.

ವಿದ್ಯಾರ್ಹತೆ:

ಅಭ್ಯರ್ಥಿಗಳು ಪಿಯುಸಿ ವಿದ್ಯಾರ್ಹತೆ ಮತ್ತು ಸರ್ಟಿಫಿಕೇಷನ್​ ಕೋರ್ಸ್​ ಇನ್​​ ಲೈಬ್ರರಿ ಸೈನ್ಸ್​ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್​ ಕೋರ್ಸ್​ ಉತ್ತೀರ್ಣರಾಗಿರಬೇಕು.

ಸರ್ಟಿಫಿಕೇಷನ್​ ಕೋರ್ಸ್​ ಇನ್​ ಲೈಬ್ರರಿ ಸೈನ್ಸ್​ ಪದವಿ ಪಡದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದಿದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಹುದ್ದೆಗೆ ಪರಿಗಣಿಸಲಾಗುವುದು.

ವಿಶೇಷ ಸೂಚನೆ:

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರಬೇಕು. ಈ ಸಂಬಂದ ತಹಶೀಲ್ದಾರ್​​ ಅವರಿಂದ ವಾಸಸ್ಥಳ ಪ್ರಮಾಣ ಪತ್ರವನ್ನು ಪಡೆದು ಅರ್ಜಿ ಜೊತೆ ಸಲ್ಲಿಸಬೇಕು.

ವಯೋಮಿತಿ:

ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 40 ವರ್ಷದವರೆಗೆ ವಯೋಮಿತಿ ಸಡಿಲಿಕೆ ನಡೆಸಲಾಗುವುದು.

ಆಯ್ಕೆ: ಮೆರಿಟ್​ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುವುದು.

ಅರ್ಜಿ ಸಲ್ಲಿಕೆ:

ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 200 ರೂ, ವಿಕಲಚೇತನ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ಪಾವತಿಸಬೇಕಿದೆ.

ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ಕ್ಯೂ ಆರ್​ ಕೋಡ್​ ಅಥವಾ ಬ್ಯಾಂಕ್​ ಮೂಲಕವೂ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಅಭ್ಯರ್ಥಿಗಳು ಅಕ್ಟೋಬರ್​ 16ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್​ 6 ಆಗಿದೆ.

ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಸವಿವರಕ್ಕೆ zpdk.karnataka.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago