ದೇಶ

ಪತ್ನಿಯ ಆತ್ಮಹತ್ಯೆ ಸುದ್ದಿ ಕೇಳುತ್ತಿದ್ದಂತೆ ತಲೆಗೆ ಗುಂಡು ಹಾರಿಸಿಕೊಂಡ ಯೋಧ

ಶ್ರೀನಗರ : ಜಮ್ಮು ಕಾಶ್ಮೀರದ ಕುಪ್ವಾರದಲ್ಲಿ ಗಡಿ ಭದ್ರತಾ ಪಡೆಯ ಯೋಧನೊಬ್ಬ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಬುಧವಾರ ನಡೆದಿದೆ.

Advertisement
Advertisement
Advertisement

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ನಿಯೋಜಿಸಲಾದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೆಡ್ ಕಾನ್‌ಸ್ಟೆಬಲ್ ರಾಜೇಂದ್ರ ಯಾದವ್ (28) ಆತ್ಮಹತ್ಯೆಗೆ ಶರಣಾದ ಯೋಧ.

ಯೋಧ ರಾಜೇಂದ್ರ ಯಾದವ್ ಕಳೆದ ಎಂಟು ತಿಂಗಳ ಹಿಂದೆಯಷ್ಟೇ ರಾಜಸ್ಥಾನದ ಕೊಟ್‌ಪುಟ್ಲಿ-ಬೆಹ್ರೋರ್ ಜಿಲ್ಲೆಯ ಧೀರ್‌ಪುರ ಗ್ರಾಮದ ನಿವಾಸಿ ಅಂಶು ಯಾದವ್ ಅವರನ್ನು ಮದುವೆಯಾಗಿದ್ದರು. ಮದುವೆಯಾದ ಕೆಲವೇ ದಿನಗಳಲ್ಲಿ ಇಬ್ಬರ ನಡುವೆ ಸಣ್ಣಪುಟ್ಟ ವಿಚಾರಗಳಿಗೆ ಜಗಳವಾಗುತ್ತಿತ್ತು ಎನ್ನಲಾಗಿದೆ.

ಈ ನಡುವೆ ಕರ್ತವ್ಯಕ್ಕೆ ಹಾಜರಾಗಿದ್ದ ರಾಜೇಂದ್ರ ಯಾದವ್ ದಿನ ಪತ್ನಿ ಜೊತೆ ಕರೆ ಮಾಡಿ ಮಾತನಾಡುತ್ತಿದ್ದ ಆದರೆ ಬುಧವಾರ ಕರೆ ಮಾಡಿದ ಸಂದರ್ಭ ಇಬ್ಬರ ನಡುವೆ ಯಾವುದೋ ವಿಚಾರಕ್ಕೆ ಜಗಳವಾಗಿದೆ ಇದು ಗಂಭೀರ ಸ್ಥಿತಿಗೆ ತಲುಪಿತ್ತು ಎನ್ನಲಾಗಿದೆ ಜಗಳದಿಂದ ಮುನಿಸಿಕೊಂಡ ಪತ್ನಿ ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆದರೆ ಪತಿಗೆ ಪತ್ನಿ ಸಿಟ್ಟಲ್ಲಿ ಈ ರೀತಿ ಮಾಡುತ್ತಾಳೆ ಎಂಬ ಆಲೋಚನೆ ಇದ್ದಿರಲಿಕ್ಕಿಲ್ಲ ಸ್ವಲ್ಪ ಸಮಯದ ಬಳಿಕ ರಾಜೇಂದ್ರ ಯಾದವ್ ಮೊಬೈಲ್ ಗೆ ಕರೆಯೊಂದು ಬಂದಿದ್ದು ಈ ಕರೆಯಲ್ಲಿ ರಾಜೇಂದ್ರ ಯಾದವ್ ಪತ್ನಿ ಅಂಶು ಯಾದವ್ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಗೊತ್ತಾಗಿದೆ. ಪತ್ನಿಯ ಸಾವಿನ ಸುದ್ದಿ ಕೇಳುತ್ತಲೇ ಆಘಾತಕ್ಕೆ ಒಳಗಾದ ಯೋಧ ತನ್ನ ಬಳಿ ಇದ್ದ ಸರ್ವಿಸ್ ರಿವಾಲ್ವರ್ ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಅತ್ತ ರಾಜಸ್ತಾನದಲ್ಲಿ ಅಂಶು ಯಾದವ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಕುಟುಂಬಸ್ಥರಿಗೆ ದೇಹವನ್ನು ಹಸ್ತಾಂತರಿಸಿದ್ದು ಇತ್ತ ರಾಜೇಂದ್ರ ಯಾದವ್ ಅವರ ಪಾರ್ಥಿವ ಶರೀರವನ್ನು ಗುರುವಾರ ಜೈಪುರಕ್ಕೆ ತರುವ ಸಾಧ್ಯತೆ ಇದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago