ದೇಶ

ಆನ್ ಲೈನ್ ವಂಚನೆಗೆ ಬೀಳಲಿದೆ ಬ್ರೇಕ್‌- ಗೂಗಲ್‌ನಿಂದ ಡಿಜಿಕವಚ್ ಅನಾವರಣ

ನವದೆಹಲಿ: ಹೆಚ್ಚಿನ ವಹಿವಾಟುಗಳು ಆನ್ಲೈನ್ ಮೂಲಕವೇ ನಡೆಯುತ್ತಿರುವುದರಿಂದ ಬೆದರಿಕೆ ವಂಚನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಗೂಗಲ್ ಮುಂದಾಗಿದ್ದು ಡಿಜಿಕವಚ್ ಎಂಬ ಉಪಕ್ರಮವನ್ನು ಪರಿಚಯಿಸಿದೆ.

Advertisement
Advertisement
Advertisement

ಇದು ಸೈಬರ್ ಕ್ರೈಮ್​ನಂತಹ ಪ್ರಕರಣಗಳಿಂದ ಮುಕ್ತಿ ನೀಡುತ್ತಿದೆ. ಆರ್ಥಿಕ ವಂಚನೆಯನ್ನು ಗುರುತಿಸಲು ಮತ್ತು ಅಧ್ಯಯನ ಮಾಡಲು ಇದನ್ನು ವಿನ್ಯಾಸಗೊಳಿಸಲಾಗಿದೆ.ಈ ಡಿಜಿಕವಚ್, ಆಂಡ್ರಾಯ್ಡ್ ಬಳಕೆದಾರರಿಗೆ, ಗೂಗಲ್ ಪ್ಲೇ ಪ್ರೊಟೆಕ್ಟ್ ನೀಡುತಿದ್ದು ,ಇದರ ಮೂಲಕ ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗಳು, ಡೇಟಾ ಮತ್ತು ಅಪ್ಲಿಕೇಶನ್ಗಳನ್ನು ಸುರಕ್ಷಿತವಾಗಿರಿಸಲು ಕಾರ್ಯನಿರ್ವಹಿಸುತ್ತದೆ.

ಬಳಕೆದಾರರು ಹಣವನ್ನು ಕಳುಹಿಸುವಾಗ ಮತ್ತು ಸ್ವೀಕರಿಸುವಾಗ ಫಿಶಿಂಗ್ ಮತ್ತು ಇತರ ವಂಚನೆ ಅಪಾಯಗಳನ್ನು ಗುರುತಿಸಲು ಸುರಕ್ಷತಾ ಎಚ್ಚರಿಕೆಗಳನ್ನು ಕಳುಹಿಸುತ್ತದೆ, ಮತ್ತು ಅನುಮಾನಾಸ್ಪದ ವಹಿವಾಟುಗಳು ಕಂಡುಬಂದರೆ ಎಚ್ಚರಿಕೆ ನೀಡಲು ಸಹಕಾರಿಯಾಗುತ್ತದೆ.

ಸೈಬರ್ ಕ್ರೈಮ್ನಂತಹ ಪ್ರಕರಣಗಳಿಂದ ಮುಕ್ತಿ ನೀಡುವುದರ ಜೊತೆಗೆ, ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ಆಗುವ ಹಣಕಾಸಿನ ನಷ್ಟವನ್ನು ತಡೆಗಟ್ಟವುದು ಡಿಜಿಕವಚ್‌ ನಿಂದ ಸಾಧ್ಯವಾಗಲಿದೆ.

ಆರ್ಥಿಕ ವಂಚನೆಯನ್ನು ಗುರುತಿಸಲು ಮತ್ತು ಅಧ್ಯಯನ ಮಾಡಲು ಇದನ್ನು ವಿನ್ಯಾಸಗೊಳಿಸಲಾಗಿದ್ದು, ಗೂಗಲ್​ನ ಇಮೇಲ್ ಸೇವೆಯಾದ ಜಿ-ಮೇಲ್, ಸ್ಪ್ಯಾಮ್, ಫಿಶಿಂಗ್ ಮತ್ತು ಮಾಲ್‌ವೇರ್‌ನ ಶೇಕಡಾ 99.9 ಕ್ಕಿಂತ ಹೆಚ್ಚಿನದನ್ನು ಸ್ವಯಂಚಾಲಿತವಾಗಿ ನಿರ್ಬಂಧಿಸುತ್ತದೆ.

ಈ ಮಟ್ಟದ ರಕ್ಷಣೆಯು ಪ್ರಪಂಚದಾದ್ಯಂತ 1.5 ಬಿಲಿಯನ್ ಇನ್‌ಬಾಕ್ಸ್‌ಗಳನ್ನು ಸುರಕ್ಷಿತಗೊಳಿಸುತ್ತದೆ. ಇದರಿಂದ ವ್ಯಕ್ತಿಗಳು ಫಿಶಿಂಗ್ ವಂಚನೆಗಳಿಗೆ ಬಲಿಯಾಗುವ ಸಾಧ್ಯತೆ ಕಡಿಮೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago