ಕ್ರೀಡಾ ಸುದ್ದಿ

ಬಾಂಗ್ಲಾ ವಿರುದ್ಧ ಭಾರತಕ್ಕೆ 7 ವಿಕೆಟ್‌ಗಳ ಜಯ

ಪುಣೆ: ಟೀಂ ಇಂಡಿಯಾ ಬಾಂಗ್ಲಾದೇಶದ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

Advertisement
Advertisement
Advertisement

ಇನ್ನೂ ಬಾಂಗ್ಲಾದೇಶದ ವಿರುದ್ಧ ಶತಕ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 48ನೇ ಶತಕ ಸಿಡಿಸಿದ ವಿರಾಟ್‌, 26 ಸಾವಿರ ಅಂತಾರಾಷ್ಟ್ರೀಯ ರನ್‌ಗಳನ್ನು ಪೂರೈಸಿದ ವಿಶೇಷ ಸಾಧನೆಯನ್ನೂ ಮಾಡಿದ್ದಾರೆ. ಜೊತೆಗೆ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 78ನೇ ಶತಕ ಸಿಡಿಸಿದ ವಿಶ್ವದ 2ನೇ ಆಟಗಾರ ಸಹ ಎನಿಸಿಕೊಂಡಿದ್ದಾರೆ.

ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಭಾರತದ ವಿರುದ್ಧ ನಡೆದ ವಿಶ್ವಕಪ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವು ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 256 ರನ್ ಗಳಿಸಿತ್ತು. 257ರನ್‌ಗಳ ಗುರಿ ಬೆನ್ನತ್ತಿದ್ದ ಭಾರತ 41.3 ಓವರ್‌ಗಳಲ್ಲೇ 3 ವಿಕೆಟ್‌ ನಷ್ಟಕ್ಕೆ 261 ರನ್‌ ಸಿಡಿಸಿ ಗೆಲುವು ಸಾಧಿಸಿತು. ಈ ಮೂಲಕ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಸತತ 4ನೇ ಗೆಲುವು ತನ್ನದಾಗಿಸಿಕೊಂಡಿತು.

ಚೇಸಿಂಗ್‌ ಆರಂಭಿಸಿದ ಭಾರತ ಉತ್ತಮ ಆರಂಭ ಪಡೆದುಕೊಂಡಿತ್ತು. ಮೊದಲ ವಿಕೆಟ್‌ಗೆ ನಾಯಕ ರೋಹಿತ್‌ ಶರ್ಮಾ ಮತ್ತು ಶುಭಮನ್‌ ಗಿಲ್‌ ಜೋಡಿ 12.4 ಓವರ್‌ಗಳಲ್ಲಿ 48 ರನ್‌ ಬಾರಿಸಿತ್ತು. ರೋಹಿತ್‌ 40 ಎಸೆತಗಳಲ್ಲಿ 2 ಸಿಕ್ಸರ್‌, 7 ಬೌಂಡರಿಯೊಂದಿಗೆ 48 ರನ್‌ ಬಾರಿಸಿ ಪೆವಿಲಿಯನ್‌ ಸೇರಿಕೊಂಡರು. ಆದ್ರೆ ಬ್ಯಾಟಿಂಗ್‌ ಅಬ್ಬರ ಮುಂದುವರಿಸಿದ ಗಿಲ್‌ 55 ಎಸೆತಗಳಲ್ಲಿ 53 ರನ್‌ (5 ಬೌಂಡರಿ, 2 ಸಿಕ್ಸರ್)‌ ಬಾರಿಸಿ ನಿರ್ಗಮಿಸಿದರು. ಶ್ರೇಯಸ್‌ ಅಯ್ಯರ್‌ 19 ರನ್‌ಗಳಿ ಔಟಾಗುತ್ತಿದ್ದಂತೆ ಒಂದಾದ ಕೆ.ಎಲ್‌ ರಾಹುಲ್‌ ಹಾಗೂ ವಿರಾಟ್‌ ಕೊಹ್ಲಿ ಜೋಡಿ ಮುರಿಯದ 4ನೇ ವಿಕೆಟ್‌ಗೆ 74 ಎಸೆತಗಳಲ್ಲಿ 83 ರನ್‌ಗಳ ಜೊತೆಯಾಟ ನೀಡಿತು. ವಿರಾಟ್‌ ಕೊಹ್ಲಿ 97 ಎಸೆತಗಳಲ್ಲಿ ಅಜೇಯ 103 ರನ್‌ (6 ಸಿಕ್ಸರ್‌, 6 ಬೌಂಡರಿ) ಗಳಿಸಿದರೆ, ಕೆ.ಎಲ್‌ ರಾಹುಲ್‌ 34 ರನ್‌ (34 ಎಸೆತ, 1 ಸಿಕ್ಸರ್‌, 3 ಬೌಂಡರಿ) ಬಾರಿಸಿ ಅಜೇಯರಾಗುಳಿದರು.

ಟಾಸ್ ಗೆದ್ದು ಮೊದಲು ಕ್ರೀಸ್‌ಗಿಳಿದ ಬಾಂಗ್ಲಾದೇಶದ ಪರ ಆರಂಭಿಕರಾಗಿ ಕಣಕ್ಕಿಳಿದ ತಂಜಿದ್ ಹಸನ್ ಹಾಗೂ ಲಿಟ್ಟನ್ ದಾಸ್ ಜೋಡಿ ಉತ್ತಮ ಆರಂಭ ನೀಡಿತ್ತು. ಮೊದಲ ವಿಕೆಟ್‌ಗೆ 14.4 ಓವರ್‌ಗಳಲ್ಲಿ 93 ಬಾರಿಸಿತ್ತು. ಈ ಜೋಡಿ ವಿಕೆಟ್ ಬೀಳುತ್ತಿದ್ದಂತೆ ನಿಧಾನಗತಿಯ ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ಸತತ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಾ ಸಾಗಿತು. 37.2 ಓವರ್‌ಗಳಲ್ಲಿ 179 ರನ್‌ಗಳಿಗೆ ಪ್ರಮುಖ 5 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಗಿತ್ತು. ಆದ್ರೆ ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಮುಶಾಫ್ಕುರ್ ರಹೀಮ್ ಮತ್ತು ಮಹಮೂದುಲ್ಲಾ 32 ರನ್‌ಗಳ ಸಣ್ಣ ಪ್ರಮಾಣದ ಜೊತೆಯಾಟದಿಂದ ತಂಡಕ್ಕೆ ಚೇತರಿಕೆ ನೀಡಿದರು. ಅಂತಿಮವಾಗಿ ಬಾಂಗ್ಲಾದೇಶ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 256 ರನ್ ಗಳಿಸಿತು.

ತಂಜಿದ್ ಹಸನ್ 51 ರನ್ (43 ಎಸೆತ, 5 ಸಿಕ್ಸರ್, 3 ಬೌಂಡರಿ), ಲಿಟ್ಟನ್ ದಾಸ್ 66 ರನ್ (82 ಎಸೆತ, 7 ಬೌಂಡರಿ), ನಜ್ಮುಲ್ ಹೊಸೈನ್ ಶಾನ್‌ಟೊ 8 ರನ್, ಮೆಹದಿ ಹಸನ್ ಮಿರ್ಜಾ 3 ರನ್, ತೌಹಿದ್ ಹರಿದಿ 16 ರನ್, ಮುಶಾಫ್ಕುರ್ ರಹೀಮ್ 38 ರನ್ (46 ಎಸೆತ, 1 ಸಿಕ್ಸರ್, 1 ಬೌಂಡರಿ), ಮಹಮ್ಮದುಲ್ಲಾ 46 ರನ್ (36 ಎಸೆತ, 3 ಬೌಂಡರಿ, 3 ಸಿಕ್ಸರ್), ನಸುಮ್ ಅಹ್ಮದ್ 14 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರೆ, ಮುಸ್ತಫಿಜುರ್ ರೆಹಮಾನ್ 1 ರನ್, ಶರೀಫುಲ್ ಇಸ್ಲಾಂ 7 ರನ್‌ಗಳಿಸಿ ಅಜೇಯರಾಗುಳಿದರು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago