ಜಿಲ್ಲೆ

ವಿಶೇಷ ಕಾರ್ಯಕ್ರಮಗಳ ಮೂಲಕ ಜನರ ಗಮನ ಸೆಳೆದ ಮಡಿಕೇರಿಯ ಮಕ್ಕಳ ದಸರಾ

ಮಡಿಕೇರಿ : ಮಡಿಕೇರಿಯಲ್ಲಿ ನಡೆದ ಮಕ್ಕಳ ದಸರಾವು ವಿಶೇಷ ಕಾರ್ಯಕ್ರಮಗಳ ಮೂಲಕ ಜನರ ಗಮನ ಸೆಳೆಯಿತು. ಮಕ್ಕಳು ತರಕಾರಿ ಹಾಗೂ ತಿನಿಸುಗಳನ್ನ ಮಾರಾಟ ಮಾಡಿ ತಮ್ಮ ವ್ಯಾಪಾರ ಕೌಶಲ್ಯ ಪ್ರದರ್ಶಿಸಿದರು.

Advertisement
Advertisement
Advertisement

ಒಂದೆಡೆ ಭರ್ಜರಿ ವ್ಯಾಪಾರ, ಮತ್ತೊಂದೆಡೆ ದೇವಾನುದೇವತೆಗಳ ಆರ್ಭಟ. ವೇದಿಕೆಯಲ್ಲಿ ಬಗೆ ಬಗೆಯ ವೇಷ ತೊಟ್ಟು ಗಮನ ಸೆಳೆದ ಪುಟಾಣಿಗಳು. ಚಿಣ್ಣರ ಕೈಯಿಂದ ಪಾನಿಪುರಿ, ಬೇಲ್ ಪುರಿ, ಜೋಳಪುರಿ ಸೇರಿದಂತೆ ಬಗೆಬಗೆಯ ತಿನಿಸುಗಳು. ಎಲ್ಲೆಲ್ಲೂ ಮಕ್ಕಳದ್ದೆ ಸಂಭ್ರಮ. ಸಾರ್ವಜನಿಕರು ಮಕ್ಕಳ ಸಂತೆ, ಅಂಗಡಿ ಮಳಿಗೆಗಳನ್ನು ಕುತೂಹಲದಿಂದ ವೀಕ್ಷಿಸಿದರು.

ಮಕ್ಕಳ ದಸರಾ ಅಂಗವಾಗಿ ಮಕ್ಕಳ ಸಂತೆ, ಮಕ್ಕಳ ಅಂಗಡಿ, ಮಕ್ಕಳ ಮಂಟಪ, ಛದ್ಮವೇಷ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಮಡಿಕೇರಿ ದಸರಾ ಸಮಿತಿ ಸಹಯೋಗದಲ್ಲಿ ನಗರದ ಗಾಂಧಿ ಮೈದಾನದಲ್ಲಿ ನಡೆದ 10ನೇ ವರ್ಷದ ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.

ಮಕ್ಕಳ ಸಂತೆ ಹಾಗೂ ಅಂಗಡಿ ಸ್ಪರ್ಧೆಯಲ್ಲಿ ಸುಮಾರು 100 ಕ್ಕೂ ಅಧಿಕ ಸ್ಟಾಲ್‌ಗಳನ್ನು ಹಾಕಲಾಗಿತ್ತು. ಬಗೆ ಬಗೆಯ ತರಕಾರಿಗಳು, ಸೊಪ್ಪುಗಳು, ಕಾಡಿನಲ್ಲಿ ಸಿಗುವ ಕೆಸ, ತೆರ್ಮೆ ಸೊಪ್ಪು, ವಿವಿಧ ಜಾತಿಯ ಹಣ್ಣುಗಳನ್ನು ಮಕ್ಕಳು ಭರ್ಜರಿಯಾಗಿ ವ್ಯಾಪಾರ ಮಾಡಿದರು.

ಮಡಿಕೇರಿಯ ಬಾಲಕಿಯರ ಬಾಲಮಂದಿರದ ವಿದ್ಯಾರ್ಥಿನಿಯರು ತಾವೇ ಸ್ವತಃ ತಯಾರಿಸಿದ್ದ ಕರಕುಶಲ ವಸ್ತುಗಳನ್ನು ಪ್ರದರ್ಶಿಸಿದರು.

ಮಕ್ಕಳ ಮಂಟಪದಲ್ಲಿ ಈ ಬಾರಿ 30ಕ್ಕೂ ಅಧಿಕ ಮಕ್ಕಳ ಮಂಟಪ ಮಾತ್ರ ಸ್ಪರ್ಧೆಯಲ್ಲಿ ಪಾಲ್ಗೊಂಡಿತ್ತು. ಮಡಿಕೇರಿ ದಸರಾದ ಪ್ರಮುಖ ಆಕರ್ಷಣೆಯಾಗಿರುವ ದಶಮಂಟಪಗಳಂತೆ ಮಕ್ಕಳು ಕೂಡ ವಿವಿಧ ಕಥಾ ಸಾರಾಂಶಗಳನ್ನು ಒಳಗೊಂಡ ಮಂಟಪಗಳನ್ನು ರಚಿಸಿದ್ದರು. ಮಂಟಪದಲ್ಲಿ ದೇವತೆಗಳು ದುಷ್ಟರನ್ನು ಸಂಹಾರ ಮಾಡುವ ದೃಶ್ಯಗಳನ್ನು ಪ್ರದರ್ಶಿಸಿದರು.

ಛದ್ಮವೇಷ ಸ್ಪರ್ಧೆಯಲ್ಲಿ ಸುಮಾರು 100ಕ್ಕೂ ಅಧಿಕ ಮಂದಿ ಮಕ್ಕಳು ವಿವಿಧ ವೇಷ ತೊಟ್ಟು ಪ್ರೇಕ್ಷಕರ ಗಮನ ಸೆಳೆದರು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago