ಮುಂಬೈ : ‘ವಾಂಖೇಡೆ ಸ್ಟೇಡಿಯಂ’ನಲ್ಲಿ ನಡೆದ ಮಹತ್ವದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹೀನಾಯ ಸೋಲು ಅನುಭವಿಸಿದ್ದು, ಜಾಸ್ ಬಟ್ಲರ್ ಬಳಗದ ಹಾದಿ ದುರ್ಗಮಗೊಂಡಿದೆ.
ದಕ್ಷಿಣ ಆಫ್ರಿಕಾ ನೀಡಿದ 400 ರನ್ ಗಳ ಬೃಹತ್ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ ದಕ್ಷಿಣ ಆಫ್ರಿಕಾ ಬೌಲಿಂಗ್ ಬಿಗಿ ದಾಳಿಗೆ ನಲುಗಿ ಒಬ್ಬರಾದಂತೆ ಒಬ್ಬರು ಪೆವಿಲಿಯನ್ ಪರೇಡ್ ನಡೆಸಿದರು.
22 ಓವರ್ ಗಳಲ್ಲಿ 170 ರನ್ ಗಳಿಸಲಷ್ಟೇ ಶಕ್ತವಾಗಿ 229 ರನ್ ಗಳ ಅಂತರದ ಹೀನಾಯ ಸೋಲನ್ನು ಅನುಭವಿಸಿತು.
ಜಾನಿ ಬೈರ್ಸ್ಟೋ 10, ಜೋ ರೂಟ್ 2, ಡೇವಿಡ್ ಮಲಾನ್ 6, ಬೆನ್ ಸ್ಟೋಕ್ಸ್ 5, ನಾಯಕ ಜೋಸ್ ಬಟ್ಲರ್ 15, ಹ್ಯಾರಿ ಬ್ರೂಕ್ 17,ಆದಿಲ್ ರಶೀದ್ 10, ಡೇವಿಡ್ ವಿಲ್ಲಿ 12, ಗಸ್ ಅಟ್ಕಿನ್ಸನ್ 35 ರನ್ ಗಳಿಸಿ ಔಟಾದರು. ಮಾರ್ಕ್ ವುಡ್ 17 ಎಸೆತಗಳಲ್ಲಿ 43ರನ್ ಬಾರಿಸಿ 5 ಆಕರ್ಷಕ ಸಿಕ್ಸರ್ ಗಳನ್ನು ಸಿಡಿಸಿ ಕೊನೆಯಲ್ಲಿ ರಂಜಿಸಿದರು. ಕೊನೆಯವರಾಗಿ ಬ್ಯಾಟಿಂಗ್ ಗೆ ಇಳಿಯಬೇಕಾಗಿದ್ದ ರೀಸ್ ಟೋಪ್ಲಿ ಗಾಯಾಳಾಗಿ ನಿವೃತ್ತಿಯಾದ ಕಾರಣ ಬ್ಯಾಟಿಂಗ್ ಗೆ ಬರಲು ಸಾಧ್ಯವಾಗದ ಕಾರಣಕ್ಕೆ 9 ವಿಕೆಟ್ ಕಳೆದುಕೊಂದಾಗಲೇ ಪಂದ್ಯ ಮುಕ್ತಾಯವಾಯಿತು.
ಜೆರಾಲ್ಡ್ ಕೋಟ್ಜೇ 3 ವಿಕೆಟ್ ಪಡೆದು ಮಿಂಚಿದರೆ, ಲುಂಗಿ ಎನ್ಗಿಡಿ, ಮಾರ್ಕೊ ಜಾನ್ಸೆನ್ ತಲಾ 2, ಕಗಿಸೊ ರಬಾಡ ಮತ್ತು ಕೇಶವ್ ಮಹಾರಾಜ್ ತಲಾ1 ವಿಕೆಟ್ ಪಡೆದು ಬೌಲಿಂಗ್ ಸಾಮರ್ಥ್ಯ ತೋರಿದರು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…