ಅಂತರಾಷ್ಟ್ರೀಯ

ರಷ್ಯಾ ಅಧ್ಯಕ್ಷ ಪುಟಿನ್​ಗೆ ಹೃದಯಾಘಾತ

ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ಹೃದಯ ಸ್ತಂಭನವಾಗಿರುವ ಸುದ್ದಿ ವರದಿಯಾಗಿದೆ. ಮಾಧ್ಯಮ ವರದಿಗಳ ಪ್ರಕಾರ ಭಾನುವಾರ ಅ. 22 ರಂದು ಸಂಜೆ ಪುಟಿನ್‌ಗೆ ಕಾರ್ಡಿಯಾಕ್ ಅರೆಸ್ಟ್ ಆಗಿದೆ ಎನ್ನಲಾಗಿದೆ. ಸದ್ಯ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಧ್ಯಮ ವರದಿ ಮಾಡಿದೆ.

Advertisement
Advertisement
Advertisement

ವರದಿ ಪ್ರಕಾರ, ಅಕ್ಟೋಬರ್ 22ರಂದು ರಾತ್ರಿ 9ಗಂಟೆಗೆ ವ್ಲಾದಿಮಿರ್ ಪುಟಿನ್ ಅವರು ತಮ್ಮ ಬೆಡ್​ರೂಮ್​ನಲ್ಲಿ ಮಲಗಿದ ಸ್ಥಿತಿಯಲ್ಲಿ ಸೆಕ್ಯೂರಿಟಿ ಅಧಿಕಾರಿಗಳಿಗೆ ಕಂಡಿದ್ದರು. ಆಹಾರ ಮತ್ತು ಡ್ರಿಂಕ್ಸ್ ಇದ್ದ ಟೇಬಲ್ ಕೆಳಗೆ ಬಿದ್ದಿತ್ತು ಎನ್ನಲಾಗುತ್ತಿದೆ.ಪುಟಿನ್‌ ಕೆಳಗೆ ಬಿದ್ದಾಗ ಟೇಬಲ್​ಗೆ ತಾಗಿ ಅದು ಬಿದ್ದು ಶಬ್ದ ಬಂದ ಹಿನ್ನಲೆ ನೋಡಿದಾಗ ಪುಟಿನ್ ಅವರು ನೆಲದಲ್ಲಿ ಬಿದ್ದು ಒದ್ದಾಡಿದ್ದಾರೆ.

ಅಲ್ಲೇ ಪಕ್ಕದ ರೂಮುಗಳಲ್ಲಿದ್ದ ಕರ್ತವ್ಯನಿರತ ವೈದ್ಯರನ್ನು ಕೂಡಲೇ ಕರೆಸಲಾಗಿದೆ ಎಂದು ಟೆಲಿಗ್ರಾಂ ಚಾನಲ್​ನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ವ್ಲಾದಿಮಿರ್ ಪುಟಿನ್ ಅವರನ್ನು ಅಲ್ಲೇ ವಿಶೇಷ ಕೋಣೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಐಸಿಯುಗೆ ದಾಖಲಿಸಲಾಯಿತು.

ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡಿದ ಕಾರಣ ರಷ್ಯಾ ಅಧ್ಯಕ್ಷರು ಚೇತರಿಸಿಕೊಂಡಿದ್ದಾರೆ ಎಂದು ಜನರಲ್ ಎಸ್​ವಿಆರ್ ಹೆಸರಿನ ಟೆಲಿಗ್ರಾಂ ಚಾನಲ್​ನಲ್ಲಿ ತಿಳಿಸಲಾಗಿದೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago