ಕರಾವಳಿ

ಭೂಗತಪಾತಕಿ ರವಿ ಪೂಜಾರಿಯ ಸಹಚರನ ಬಂಧನ

ಮಂಗಳೂರು : ಭೂಗತಪಾತಕಿ ರವಿ ಪೂಜಾರಿ ಮತ್ತು ಕಲಿಯೋಗೀಶ ಸಹಚರನನ್ನು ಕೊಣಾಜೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಟೋರಿಯಸ್ ಶಾರ್ಪ್ ಶೂಟರ್ ಕೇರಳದ ಮಂಜೇಶ್ವರ ಪೈವಳಿಕೆ ನಿವಾಸಿ ಮೊಹಮ್ಮದ್ ಹನೀಫ್ ಬಂಧಿತ ಆರೋಪಿ. ಆರೋಪಿ ಮೊಹಮ್ಮದ್​ ಹನೀಫ್​​ ಜಿಲ್ಲೆಯ ಹಲವು ಠಾಣೆಗಳಲ್ಲಿ ವಾರೆಂಟ್ ಎದುರಿಸುತ್ತಿದ್ದನು.

Advertisement
Advertisement
Advertisement

ಆರೋಪಿ ಹನೀಫ್​ ನಟೋರಿಯಸ್​ ಕ್ರಮಿನಿಲ್​ ಆಗಿದ್ದು, ರವಿಪೂಜಾರಿಯ ಎಲ್ಲ ಕೃತ್ಯಗಳಿಗೆ ಮಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳನ್ನು ಕಾರ್ಯಕ್ಷೇತ್ರ ಮಾಡಿಸಿಕೊಂಡಿದ್ದು ಹಲವು ಶೂಟೌಟ್, ದರೋಡೆ, ಬೆದರಿಕೆ ಪ್ರಕರಣದಲ್ಲಿ ರಾಜ್ಯದ ಅನೇಕ ಠಾಣೆಗಳಿಂದ ಬಂಧನ ವಾರಂಟ್ ಎದುರಿಸುತ್ತಿದ್ದನು. ಈತನ ವಿರುದ್ಧ ಕೊಣಾಜೆ, ಮಂಗಳೂರು ಉತ್ತರ, ಪುತ್ತೂರು, ಬರ್ಕೆ, ವಿಟ್ಲ, ಉಳ್ಳಾಲ, ಬೆಂಗಳೂರು ವಿಮಾನ ನಿಲ್ದಾಣ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.

ಈತ ಮಂಗಳೂರು ಉತ್ತರ ಠಾಣಾ ವ್ಯಾಪ್ತಿಯ ಸಂಜೀವ್ ಶೆಟ್ಟಿ ಸಿಲ್ಕ್ಸ್ ಮಳಿಗೆ ಮತ್ತು ಪುತ್ತೂರು ರಾಜಧಾನಿ ಜ್ಯುವೆಲ್ಲರ್ಸ್​ನಲ್ಲಿ ಶೂಟೌಟ್ ನಡೆಸಿದ್ದನು.

ಆರೋಪಿಯನ್ನು ಕೇರಳದಲ್ಲಿ ಬಂಧಿಸಲಾಗಿದ್ದು, ಈಗಲೂ ಹಫ್ತಾ ವಸೂಲಿಯಲ್ಲಿ ತೊಡಗಿಸಿಕೊಂಡಿದ್ದನು ಎನ್ನಲಾಗಿದೆ. ಎಸಿಪಿ ಧನ್ಯ ನಾಯಕ್ ನೇತೃತ್ವದ ತಂಡ ಮತ್ತು ಕೊಣಾಜೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago