ಕ್ರೀಡಾ ಸುದ್ದಿ

ನೆದರ್ಲೆಂಡ್ಸ್‌ ವಿರುದ್ಧ ಆಸ್ಟ್ರೇಲಿಯಾಗೆ 309 ರನ್‌ಗಳ ಜಯ

ನವದೆಹಲಿ: ನವದೆಹಲಿಯಲ್ಲಿ ನಡೆದ ವಿಶ್ವಕಪ್‌ 2023 ಟೂರ್ನಿಯ ನೆದರ್ಲೆಂಡ್ಸ್‌ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ಎರಡು ದಾಖಲೆ ಬರೆದಿದೆ. ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡಿದ್ದ ಆಸ್ಟ್ರೇಲಿಯಾ, ನೆದರ್ಲೆಂಡ್ಸ್‌ಗೆ 400 ರನ್‌ಗಳ ಬೃಹತ್‌ ಮೊತ್ತದ ಗುರಿ ನೀಡಿತ್ತು. ಡೇವಿಡ್‌ ವಾರ್ನರ್‌, ಮ್ಯಾಕ್ಸ್‌ವೆಲ್‌ ಅಬ್ಬರದ ಬ್ಯಾಟಿಂಗ್‌ ನೆರವಿನಿಂದ ಸವಾಲಿನ ಆಸ್ಟ್ರೇಲಿಯಾ ಸವಾಲಿನ ಮೊತ್ತ ಪೇರಿಸಿತ್ತು. ಗುರಿ ಬೆನ್ನತ್ತಿದ ನೆದರ್ಲೆಂಡ್ಸ್‌ ತಂಡ 21 ಓವರ್‌ಗಳಲ್ಲೇ ತನ್ನೆಲ್ಲ ವಿಕೆಟ್‌ ಕಳೆದುಕೊಂಡು ಕೇವಲ 90 ರನ್‌ ಗಳಿಸಿ ಹೀನಾಯ ಸೋಲು ಕಂಡಿತು.

Advertisement
Advertisement
Advertisement

ಆಸೀಸ್‌ ಬೌಲರ್‌ಗಳ ದಾಳಿಗೆ ನಲುಗಿದ ನೆದರ್ಲೆಂಡ್ಸ್‌ ಬ್ಯಾಟರ್‌ಗಳು ಆರಂಭದಿಂದ ಕೊನೆವರೆಗೂ ಪೆವಿಲಿಯನ್‌ ಪರೇಡ್‌ ನಡೆಸಿದರು. ವಿಕ್ರಮಜಿತ್ ಸಿಂಗ್ (25), ಮ್ಯಾಕ್ಸ್ ಒ’ಡೌಡ್ (6), ಕಾಲಿನ್ ಅಕರ್ಮನ್ (10), ಸೈಬ್ರಾಂಡ್ ಎಂಗಲ್‌ಬ್ರೆಕ್ಟ್ (11), ಬಾಸ್ ಡಿ ಲೀಡೆ (4), ಸ್ಕಾಟ್ ಎಡ್ವರ್ಡ್ಸ್ (ಔಟಾಗದೆ 12), ತೇಜ ನಿಡಮನೂರು (12), ಲೋಗನ್ ವ್ಯಾನ್ ಬೀಕ್ (0), ರೋಲೋಫ್ ವ್ಯಾನ್ ಡೆರ್ ಮೆರ್ವೆ (0), ಆರ್ಯನ್ ದತ್ (1), ಪಾಲ್ ವ್ಯಾನ್ ಮೀಕೆರೆನ್ (0) ರನ್‌ಗಳಿಗೆ ಔಟಾದರು.

ಬೌಲಿಂಗ್‌ನಲ್ಲಿ ಫಾರ್ಮ್‌ನಲ್ಲಿರುವ ಆಡಮ್ ಝಂಪಾ ಉತ್ತಮ ಪ್ರದರ್ಶನ ನೀಡಿದರು. ಆಸೀಸ್‌ ಪರವಾಗಿ 4 ವಿಕೆಟ್‌ ಪಡೆದು ಮಿಂಚಿದರು. ಮಿಚೆಲ್ ಮಾರ್ಷ್ 2 ಹಾಗೂ ಪ್ಯಾಟ್ ಕಮ್ಮಿನ್ಸ್, ಜೋಶ್ ಹ್ಯಾಜಲ್ವುಡ್, ಮಿಚೆಲ್ ಸ್ಟಾರ್ಕ್ ತಲಾ ಒಂದೊಂದು ವಿಕೆಟ್‌ ಪಡೆದರು.

ಆಸ್ಟ್ರೇಲಿಯಾ 50 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 399 ರನ್‌ಗಳ ಬೃಹತ್‌ ಮೊತ್ತ ಪೇರಿಸಿತು. ತಂಡದ ಪರವಾಗಿ ಡೇವಿಡ್‌ ವಾರ್ನರ್‌ ಹಾಗೂ ಗ್ಲೆನ್‌ ಮ್ಯಾಕ್ಸ್‌ವೆಲ್‌ ಶತಕ ಸಿಡಿಸಿ ಮಿಂಚಿದರು. ಅಬ್ಬರದ ಬ್ಯಾಟಿಂಗ್‌ ನಡೆಸಿದ ಡೇವಿಡ್‌ ವಾರ್ನರ್‌ 93 ಬಾಲ್‌ಗಳಿಗೆ 104 ರನ್‌ (11 ಫೋರ್‌, 3 ಸಿಕ್ಸರ್‌) ಬಾರಿಸಿದರು. ಗ್ಲೆನ್‌ ಮ್ಯಾಕ್ಸ್‌ವೆಲ್‌ 44 ಬಾಲ್‌ಗಳಿಗೆ 106 ರನ್‌ ಸಿಡಿಸಿ (9 ಫೋರ್‌, 8 ಸಿಕ್ಸರ್‌) ಸಿಡಿಸಿ ಮಿಂಚಿದರು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago