ಉಡುಪಿ : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಇಲ್ಲಿ ಏರ್ಪಡಿಸಿರುವ ‘ವಿಶ್ವ ಬಂಟರ ಸಮ್ಮೇಳನ 2023’ರ ಅಂಗವಾಗಿ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಆಕರ್ಷಕ ಪಥ ಸಂಚಲನ ತುಳುನಾಡಿನ ನೆಲದ ಸಂಸ್ಕೃತಿ ಮತ್ತು ಬಂಟರ ನಡುವಿನ ನಂಟಿನ ಪ್ರದರ್ಶನಕ್ಕೆ ವೇದಿಕೆಯಾಯಿತು.
ಪಥ ಸಂಚಲನದಲ್ಲಿ ಸಾಗಿಬಂದ ಕಂಬಳದ ಕೋಣಗಳು, ಹುಲಿ ವೇಷಧಾರಿಗಳು, ಚೆಂಡೆವಾದನ, ಯಕ್ಷಗಾನ ವೇಷ, ನೊಗ, ನೇಗಿಲು, ಏತ ನೀರಾವರಿಯ, ಮೊರಾಯಿ, ಮೊರ, ಕಲಶ, ಮೊದಲಾದ ಕೃಷಿ ಪರಿಕರಗಳೊಂದಿಗೆ ಸಾಗಿ ಬಂದ ಬಂಟರ ಸಂಘದ ಪ್ರತಿನಿಧಿಗಳು ನೆಲದ ಸಂಪ್ರದಾಯಗಳ ಕುರಿತು ತಮಗೆಷ್ಟು ತುಡಿತವಿದೆ ಎಂಬುದನ್ನು ತೋರ್ಪಡಿಸಿದರು.
ಒಪ್ಪ ಓರಣವಾಗಿ ಸಮವಸ್ತ್ರ ಧರಿಸಿ ಬಿಗುಮಾನದಿಂದ ಹೆಜ್ಜೆ ಹಾಕಿದ ಬಂಟರ ಸಂಘಗಳ ಪ್ರತಿನಿಧಿಗಳು ತಮ್ಮ ಸಂಘಟನೆಯ ಶಕ್ತಿ, ಸಾಮರ್ಥ್ಯವನ್ನು ಪ್ರದರ್ಶಿಸಿದರು.
ಕೆಲವು ತಂಡಗಳು ರ಼ಾಷ್ಟ್ರಧ್ವಜದಲ್ಲಿರುವ ಕೇಸರಿ ಬಿಳಿ ಹಸಿರು ಬಣ್ಣಗಳ ಸಮವಸ್ತ್ರದ ಮೂಲಕ ಗಮನ ಸೆಳೆದವು. ಕೆಲವು ತಂಡಗಳ ಮಹಿಳಾ ಪ್ರತಿನಿಧಿಗಳು ಕಳಶ ಕೈಯಲ್ಲಿ ಹಿಡಿದು ಸಾಗಿದರೆ, ಮತ್ತೆ ಕೆಲವು ತಂಡಗಳ ಮಹಿಳೆಯರು ರಾಣಿ ಅಬ್ಬಕ್ಕನ ರೀತಿ ವೇಷ ಧರಿಸಿ ಪಥ ಸಂಚಲನದ ಮೆರುಗು ಹೆಚ್ಚಿಸಿದರು. ಇನ್ನು ಕೆಲವು ತಂಡಗಳ ಸದಸ್ಯರು ಆಕರ್ಷಕ ಸೀರೆ, ಧೋತಿಯ ಮೂಲಕ ಕರಾವಳಿಯ ಸಾಂಪ್ರದಾಯಿಕ ಉಡುಪುಗಳ ಗತ್ತುಗೈರತ್ತುಗಳ ಮೂಲಕ ಗಮನಸೆಳೆದರು.
ಪಡುಬಿದ್ರಿ ತಂಡದ ಜೊತೆ ಸಾಗಿ ಬಂದ ಕಂಬಳದ ಕೋಣ ವೇದಿಕೆಗೆ ನಮಸ್ಕಾರ ಹಾಕುವ ಮೂಲಕ ಗಮನ ಸೆಳೆಯಿತು.
ಒಟ್ಟು 62 ತಂಡಗಳು ಪಥಸಂಚಲನದಲ್ಲಿ ಭಾಗವಹಿಸಿದವು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…