ರಾಜ್ಯ

ಕೇರಳದ ಎರ್ನಾಕುಲಂ ಜಿಲ್ಲೆಯ ಪ್ರೇಯರ್ ಹಾಲ್ ನಲ್ಲಿ ಭಾರೀ ಸ್ಪೋಟ

ಕೇರಳದ ಎರ್ನಾಕುಲಂ ಜಿಲ್ಲೆಯ ಸಮಾವೇಶ ಕೇಂದ್ರವೊಂದರಲ್ಲಿ ಭಾನುವಾರ ಸಂಭವಿಸಿದ ಭಾರೀ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

Advertisement
Advertisement
Advertisement

ಬೆಳಗ್ಗೆ 9 ಗಂಟೆ ಸುಮಾರಿಗೆ ಸ್ಫೋಟದ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು.

ಎರ್ನಾಕುಲಂನ ಕನ್ವೆನ್​ಷನ್ ಸೆಂಟರ್​ನಲ್ಲಿ 3 ಸ್ಫೋಟ ಸಂಭವಿಸಿದೆ. ಪ್ರಾಥಮಿಕ ತನಿಖೆಯಲ್ಲಿ ಭಯೋತ್ಪಾದಕ ಕೃತ್ಯವಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.ಕಾರ್ಯಕ್ರಮದಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು, ಸ್ಥಳಕ್ಕೆ ಎನ್​ಐಎ ತಂಡ ತೆರಳಿದ್ದು, ಸ್ಪೋಟದ ಬಗ್ಗೆ ತನಿಖೆ ನಡೆಸಲಿದೆ.ಕೊಚ್ಚಿಯ ಈಶಾನ್ಯಕ್ಕೆ ಸುಮಾರು 9.6 ಕಿಮೀ ದೂರದಲ್ಲಿರುವ ಕಲಮಸ್ಸೆರಿಯ ಕೇಂದ್ರದಲ್ಲಿ ಕ್ರಿಶ್ಚಿಯನ್ ಧರ್ಮದ ಪ್ರಾರ್ಥನಾ ಸಭೆ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ.

ರಜೆಯಲ್ಲಿರುವ ವೈದ್ಯರು ಸೇರಿದಂತೆ ಎಲ್ಲ ಆರೋಗ್ಯ ಕಾರ್ಯಕರ್ತರಿಗೆ ಕೂಡಲೇ ಹಿಂತಿರುಗುವಂತೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸೂಚನೆ ನೀಡಿದ್ದಾರೆ. ಕಲಮಸ್ಸೆರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಆರೋಗ್ಯ ಇಲಾಖೆ ನಿರ್ದೇಶಕರು ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಅವರು ಸೂಚಿಸಿದ್ದಾರೆ.

ವರದಿಗಳ ಪ್ರಕಾರ, ಸ್ಫೋಟದಲ್ಲಿ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಸ್ಫೋಟದ ಸ್ಥಳವನ್ನು ಸುತ್ತುವರೆದಿದ್ದಾರೆ.

ಸ್ಪೋಟಕ್ಕೆ ಸಂಬಂಧಿಸಿದಂತೆ ಸರ್ಕಾರ ವಿವರಗಳನ್ನು ಸಂಗ್ರಹಿಸುತ್ತಿದೆ, ಇದೊಂದು ದುರದೃಷ್ಟಕರ ಘಟನೆ, ಎಲ್ಲಾ ಉನ್ನತ ಅಧಿಕಾರಿಗಳು ಎರ್ನಾಕುಲಂಗೆ ತಲುಪಿದ್ದಾರೆ, ಡಿಜಿಪಿ ಸ್ಥಳದಲ್ಲಿದ್ದಾರೆ, ನಾವು ಇದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ, ತನಿಖೆಯ ನಂತರ ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಿದ್ದೇವೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago