ಕೇರಳದ ಕಳಮಶ್ಶೇರಿ ಸರಣಿ ಸ್ಫೋಟ ಪ್ರಕರಣ : ಓರ್ವ ವ್ಯಕ್ತಿ ಶರಣು

0
100

ತಿರುವನಂತಪುರಂ: ಕೇರಳದ ಕಳಮಶ್ಶೇರಿ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಓರ್ವ ವ್ಯಕ್ತಿ ಸ್ವತಃ ತಾನೇ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.

ತ್ರಿಶ್ಶೂರ್ ಜಿಲ್ಲೆಯ ಕೊಡಕ್ಕರ ಠಾಣೆಯ ಪೊಲೀಸರ ಮುಂದೆ ಕೊಚ್ಚಿ ನಿವಾಸಿ ಶರಣಾಗಿದ್ದಾನೆ. ಬ್ಲಾಸ್ಟ್ ಬಳಿಕ ಇಂದು (ಭಾನುವಾರ) ಮಧ್ಯಾಹ್ನ 1.30ರ ವೇಳೆಗೆ ಪೊಲೀಸ್ ಠಾಣೆಗೆ ಬಂದಿದ್ದ ವ್ಯಕ್ತಿ, ಬಾಂಬ್ ಇಟ್ಟಿದ್ದು ನಾನೇ ಎಂದು ಬಾಯ್ಬಿಟ್ಟಿದ್ದಾನೆ. ಸದ್ಯ ವ್ಯಕ್ತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಆತ ನೀಡಿರುವ ಹೇಳಿಕೆಯನ್ನು ಆಧರಿಸಿ ಅಜ್ಞಾತ ಸ್ಥಳದಲ್ಲಿಟ್ಟು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here