ಕ್ರೀಡಾ ಸುದ್ದಿ

ಲಂಕಾ ವಿರುದ್ಧ ಅಫ್ಘಾನ್ ಗೆ ಗೆಲುವು

ಪುಣೆ: ಸೋಮವಾರ ನಡೆದ ವಿಶ್ವಕಪ್ ಪಂದ್ಯದಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡರಲ್ಲೂ ಅಮೋಘ ನಿರ್ವಹಣೆ ತೋರಿದ ಅಫ್ಘಾನಿಸ್ಥಾನ ತಂಡ ಶ್ರೀಲಂಕಾ ವಿರುದ್ಧ ಜಯವನ್ನು ತನ್ನದಾಗಿಸಿಕೊಂಡಿದೆ.

Advertisement
Advertisement
Advertisement

ಅಫ್ಘಾನಿಸ್ತಾನ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಶ್ರೀಲಂಕಾ 49.3 ಓವರ್ ಗಳಲ್ಲಿ 241 ರನ್‌ಗೆ ಆಲೌಟ್ ಆಯಿತು. ಗುರಿ ಬೆನ್ನಟ್ಟಿದ ಅಫ್ಘಾನ್ ತಂಡ 45.2 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 242 ರನ್ ಗಳಿಸಿ ಜಯಭೇರಿ ಬಾರಿಸಿತು.

ರಹಮಾನುಲ್ಲಾ ಗುರ್ಬಾಜ್ ಅವರ ವಿಕೆಟನ್ನು ಅಫ್ಘಾನ್ ತಂಡ ರನ್ ಗಳಿಸುವ ಮೊದಲೇ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಸಿಲುಕಿತು. ನಂತರ ತಾಳ್ಮೆಯ ಆಟವಾಡಿದ ಇಬ್ರಾಹಿಂ ಜದ್ರಾನ್ 39 ರನ್ ಗಳಿಸಿ ಔಟಾದರು. ಬಳಿಕ ಅಮೋಘ ಅರ್ಧ ಶತಕ ಬಾರಿಸಿದ ರಹಮತ್ ಶಾ 62 ರನ್ ಗಳಿಸಿ ತಂಡಕ್ಕೆ ಗೆಲುವಿನ ಭರವಸೆ ಮೂಡಿಸಿದರು. ಬಳಿಕ ನಾಯಕ ಹಶ್ಮತುಲ್ಲಾ ಶಾಹಿದಿ ಮತ್ತು ಅಜ್ಮತುಲ್ಲಾ ಒಮರ್ಜಾಯ್ ಆಕರ್ಷಕ ಜತೆಯಾಟವಾಡಿದರು. ಶಾಹಿದಿ ರನ್ 58* , ಅಜ್ಮತುಲ್ಲಾ73* ರನ್ ದೊಡ್ಡ ಕೊಡುಗೆ ಸಲ್ಲಿಸಿ ಗೆಲುವಿನ ಕೇಕೆ ಹಾಕಿದರು.

ಲಂಕಾ ಪರ ಆರಂಭಿಕ ಆಟಗಾರ ಪಾಥುಮ್ ನಿಸ್ಸಾಂಕ 46ರನ್ , ಕುಸಾಲ್ ಮೆಂಡಿಸ್ 39, ಸದೀರ ಸಮರವಿಕ್ರಮ 36 ರನ್ ಗಳಿಸಿದರೂ ಹೆಚ್ಚು ಹೊತ್ತು ನಿಲ್ಲಲು ಸಾಧ್ಯವಾಗಲಿಲ್ಲ. ಅಫ್ಘಾನ್ ಬೌಲರ್‌ಗಳು ನಿಯಮಿತವಾಗಿ ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾದರು. ಆದಾಗ್ಯೂ, ಮಹೇಶ್ ತೀಕ್ಷಣ 29 ರನ್ ಮತ್ತು ಏಂಜೆಲೊ ಮ್ಯಾಥ್ಯೂಸ್ 23 ರನ್ ಗಳಿಸಿ ಎಂಟನೇ ವಿಕೆಟ್‌ಗೆ 42 ಎಸೆತಗಳಲ್ಲಿ ಅಮೂಲ್ಯ 45 ರನ್ ಸೇರಿಸಿದರು.

ಫಜಲ್ಕ್ ಫಾರೂಕಿ (4/34) ನಾಲ್ಕು ವಿಕೆಟ್‌ಗಳನ್ನು ಕಿತ್ತು ಅಫ್ಘಾನಿಸ್ಥಾನದ ಅತ್ಯಂತ ಯಶಸ್ವಿ ಬೌಲರ್ ಆಗಿ ಹೊರಹೊಮ್ಮಿದರು. ಮುಜೀಬ್ ಉರ್ ರೆಹಮಾನ್ (2/38), ಅಜ್ಮತುಲ್ಲಾ ಒಮರ್ಜಾಯ್ (1/37) ರಶೀದ್ ಖಾನ್ (1/50) ಎಲ್ಲರೂ ಸಾಮೂಹಿಕ ಪ್ರಯತ್ನದಿಂದ ಲಂಕಾ ವನ್ನು ಸಾಧಾರಣ ಮೊತ್ತಕ್ಕೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago