ಕ್ರೀಡಾ ಸುದ್ದಿ

ನೆದರ್ಲೆಂಡ್ಸ್​ ವಿರುದ್ಧ ಅಫ್ಘಾನಿಸ್ತಾನಕ್ಕೆ ಜಯ

ಲಕ್ನೋ: ಅಫ್ಘಾನಿಸ್ತಾನ ತಂಡ ನೆದರ್ಲೆಂಡ್ಸ್​ ವಿರುದ್ಧ 7 ವಿಕೆಟ್​ಗಳ ಗೆಲುವು ಸಾಧಿಸಿ ಸೆಮಿಫೈನಲ್​ ಸನಿಹಕ್ಕೆ ಬಂದು ನಿಂತಿದೆ.

Advertisement
Advertisement
Advertisement

ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ನಡೆಸಿದ ನೆದರ್ಲೆಂಡ್ಸ್​ 46.3 ಓವರ್​ಗಳಲ್ಲಿ ಕೇವಲ 179 ರನ್​ಗಳಿಸಿ ಸರ್ವಪತನ ಕಂಡಿತು. ಸುಲಭ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನ ​ ಆರಂಭಿಕ ಆಘಾತ ಕಂಡರೂ ಆ ಬಳಿಕ ಚೇತರಿಕೆ ಕಂಡು 31.3 ಓವರ್​ಗಳಲ್ಲಿ 3 ವಿಕೆಟ್​ ನಷ್ಟಕ್ಕೆ 181 ರನ್​ ಬಾರಿಸಿ ಜಯಭೇರಿ ಮೊಳಗಿಸಿತು.

ಚೇಸಿಂಗ್​ ವೇಳೆ ಅಫ್ಘಾನ್ ತಂಡ​ ಆರಂಭಿಕರಾದ ರಹಮಾನುಲ್ಲಾ ಗುರ್ಬಾಜ್(10) ಮತ್ತು ಇಬ್ರಾಹಿಂ ಜದ್ರಾನ್(20) ಅವರ ವಿಕೆಟ್​ ಬೇಗನೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ ಆ ಬಳಿಕ ಕ್ರೀಸ್​ಗಿಳಿದ ರಹಮತ್ ಶಾ ಮತ್ತು ನಾಯಕ ಹಶ್ಮತುಲ್ಲಾ ಶಾಹಿದಿ ಉತ್ತಮ ಇನಿಂಗ್ಸ್​ ಕಟ್ಟಿ ತಂಡಕ್ಕೆ ಆಸರೆಯಾದರು. ಇದೇ ವೇಳೆ ರಹಮತ್ ಶಾ ಅವರು 47 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದರು.

ಅರ್ಧಶತಕ ಬಾರಿಸಿ 2 ರನ್​ ಗಳಿಸಿಸುವ ವೇಳೆ ರಹಮತ್ ಶಾ ವಿಕೆಟ್​ ಕೈಚೆಲ್ಲಿದರು. ಒಟ್ಟು 54 ಎಸೆತ ಎದುರಿಸಿದ ಅವರು 8 ಬೌಂಡರಿ ಚಚ್ಚಿ 52 ರನ್​ ಗಳಿಸಿದರು. ಮೂರನೇ ವಿಕೆಟ್​ಗೆ ಶಾಹಿದಿ ಜತೆ ಅತ್ಯಮೂಲ್ಯ 74 ರನ್​ಗಳನ್ನು ಒಟ್ಟುಗೂಡಿಸಿದರು. ಈ ವಿಕೆಟ್​ ಪತನ ಬಳಿಕ ನಾಯಕ ಹಶ್ಮತುಲ್ಲಾ ಅಜೇಯ ಅರ್ಧಶತಕ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಇವರಿಗೆ ಅಜ್ಮತುಲ್ಲಾ ಒಮರ್ಜಾಯ್ ಉತ್ತಮ ಸಾಥ್​ ನೀಡಿದರು. ಒಮರ್ಜಾಯ್ 31 ರನ್​ ಬಾರಿಸಿ ಅಜೇಯರಾಗಿ ಉಳಿದರು. ಹಶ್ಮತುಲ್ಲಾ 64 ಎಸೆತಗಳಿಂದ ಅಜೇಯ 56 ರನ್ ಬಾರಿಸಿದರು.

ಇದಕ್ಕೂ ಮುನ್ನ ಬ್ಯಾಟಿಂಗ್​ ನಡೆಸಿದ ನೆದರ್ಲೆಂಡ್ಸ್​, ಆರಂಭಿಕ ಹಂತದಲ್ಲಿ 50 ಒಳಗಡೆ 5 ವಿಕೆಟ್​ ಕಳೆದುಕೊಂಡರೂ ಆ ಬಳಿಕ ಬರುವ ನಾಯಕ ಸ್ಕಾಟ್ ಎಡ್ವರ್ಡ್ಸ್ ಮತ್ತು 7ನೇ ಕ್ರಮಾಂಕದಲ್ಲಿ ಆಡಲಿಳಿಯುವ ವ್ಯಾನ್ ಡೆರ್ ಮೆರ್ವೆ ಸೇರಿಕೊಂಡು ಬೃಹತ್​ ಮೊತ್ತದ ಜತೆಯಾಟ ನಡೆಸುವ ಮೂಲಕ ತಂಡಕ್ಕೆ ನೆರವಾಗುತ್ತಿದ್ದರು. ಆದರೆ ಈ ಪಂದ್ಯದಲ್ಲಿ ಉಭಯ ಆಟಗಾರರು ಬೇಗನೆ ವಿಕೆಟ್​ ಕಳೆದುಕೊಂಡರು.

ಮ್ಯಾಕ್ಸ್‌ ಓ ಡೌಡ್‌ 40 ಎಸೆತ ಎದುರಿಸಿ 9 ಬೌಂಡರಿ ನೆರವಿನಿಂದ 42 ರನ್​ ಗಳಿಸಿದರು. ಸೈಬ್ರಾಂಡ್ ಎಂಗಲ್‌ಬ್ರೆಕ್ಟ್ ಅವರು 6 ಬೌಂಡರಿ ನೆರವಿನಿಂದ 58 ರನ್​ ಬಾರಿಸಿ ಅರ್ಧಶತಕ ಪೂರ್ತಿಗೊಳಿಸಿದರು. ಅಕರ್ಮನ್ 29 ರನ್​ ಗಳಿಸಿ ಸಣ್ಣ ಕೊಡುಗೆ ಸಲ್ಲಿಸಿದರು. ನೆದರ್ಲೆಂಡ್ಸ್​ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ ಕನಿಷ್ಠ ಒಂದು ಸಿಕ್ಸರ್​ ಕೂಡ ದಾಖಲಾಗಲಿಲ್ಲ. ಅಫ್ಘಾನ್​ ಪರ ಅನುಭವಿ ಮತ್ತು ಹಿರಿಯ ಸ್ಪಿನ್ನರ್​ ಮೊಹಮ್ಮದ್​ ನಬಿ ಒಂದು ಮೇಡನ್ 28 ರನ್​ ವೆಚ್ಚದಲ್ಲಿ 3 ವಿಕೆಟ್​ ಕಿತ್ತರು. ನೂರ್​ ಅಹ್ಮದ್​ 31 ರನ್​ಗೆ 2 ವಿಕೆಟ್​ ಪಡೆದರು. ರಶೀದ್​ ಖಾನ್​ 10 ಓವರ್​ ಬೌಲಿಂಗ್​ ನಡೆಸಿದರೂ ವಿಕೆಟ್​ ಲೆಸ್​ ಎನಿಸಿಕೊಂಡರು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago