ಬಂಟ್ವಾಳ: ಕಲ್ಲಡ್ಕ ಸಮೀಪ ಎರಡು ಕಡೆ ಹೆದ್ದಾರಿ ಮಧ್ಯೆ ಲಾರಿಗಳೆರಡು ಕೆಟ್ಟು ನಿಂತ ಪರಿಣಾಮ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿ ಶುಕ್ರವಾರ ಮಧ್ಯಾಹ್ನ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಯಿತು.
ಕಲ್ಲಡ್ಕ ಪೇಟೆಯ ಮೀನು ಮಾರುಕಟ್ಟೆ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಲಾರಿಯೊಂದು ಕೆಟ್ಟು ನಿಂತು ವಾಹನಗಳ ಸಾಗಾಟಕ್ಕೆ ಅಡ್ಡಿಯಾಯಿತು.
ಜತೆಗೆ ನರಹರಿ ಪರ್ವತದ ಬಳಿಯೂ ಅದೇ ರೀತಿ ಹೆದ್ದಾರಿಯಲ್ಲೇ ಲಾರಿ ಬಾಕಿಯಾಗಿತ್ತು. ಎರಡು ಲಾರಿಗಳು ಕೂಡ ಮಂಗಳೂರು ಭಾಗದಿಂದ ಕೋಕ್ ತುಂಬಿಸಿಕೊಂಡು ಬೆಂಗಳೂರು ಕಡೆಗೆ ಸಾಗುತ್ತಿದ್ದು, ಓವರ್ಲೋಡ್ ಪರಿಣಾಮ ಹೆದ್ದಾರಿಯಲ್ಲಿ ಬಾಕಿಯಾಗಿದೆ ಎನ್ನಲಾಗಿದೆ.
ಟ್ರಾಫಿಕ್ ಜಾಮ್ ಇದೆ ಎಂದು ವಾಹನ ಚಾಲಕರು ನಿರ್ಮಾಣ ಹಂತದ ಫ್ಲೆ$çಓವರ್ ಪಿಲ್ಲರ್ಗಳ ಮಧ್ಯೆ ಅಡ್ಡಾದಿಡ್ಡಿ ಚಲಾಯಿಸಿದ ಪರಿಣಾಮ ಮತ್ತಷ್ಟು ತೊಂದರೆ ಉಂಟಾಗಿತ್ತು. ಬಳಿಕ ಬಂಟ್ವಾಳ ಸಂಚಾರ ಪೊಲೀಸ್ ಸಿಬಂದಿ ಸುತೇಶ್ ನೇತೃತ್ವದಲ್ಲಿ ಪೊಲೀಸರು ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದರು. ಕ್ರೇನ್ ಮೂಲಕ ಲಾರಿಗಳನ್ನು ಬದಿಗೆ ಸರಿಸಿದ ಬಳಿಕ ಸಂಚಾರ ಸಹಜ ಸ್ಥಿತಿಗೆ ಮರಳಿತು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…