ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್ನ ಮಿಯಾನ್ವಾಲಿಯಲ್ಲಿರುವ ವಾಯುನೆಲೆಯ ಮೇಲೆ ಶನಿವಾರ ಬಹು ಆತ್ಮಹತ್ಯಾ ಬಾಂಬರ್ಗಳು ದಾಳಿ ನಡೆಸಿದ್ದಾರೆ.
ಹಲವು ಆತ್ಮಾಹುತಿ ಬಾಂಬ್ ದಾಳಿಕೋರರು ಶನಿವಾರ ಬೆಳಿಗ್ಗೆ ಮಿಯಾನ್ವಾಲಿ ತರಬೇತಿ ವಾಯುನೆಲೆಗೆ ನುಗ್ಗಿದ್ದಾರೆ. ಇದಕ್ಕೆ ಪ್ರತಿಯಾಗಿ ಪಾಕ್ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಪಾಕಿಸ್ತಾನ ವಾಯು ಪಡೆ ತಿಳಿಸಿದೆ.
ಶನಿವಾರ ನಡೆದ ಉಗ್ರರ ದಾಳಿಯು ವಿಫಲವಾಗಿದೆ. ಇದಕ್ಕೆ ಪರಿಣಾಮಕಾರಿ ಪ್ರತಿಕ್ರಿಯೆ ನೀಡಿರುವ ಸೇನೆ, ಉಗ್ರರ ದಾಳಿಯನ್ನು ತಡೆದು ಆಸ್ತಿ ಮತ್ತು ಸೇನೆಯ ಸುರಕ್ಷತೆ ಬಗ್ಗೆ ಖಾತ್ರಿಪಡಿಸಿದೆ. ಪಾಕ್ ಸೇನೆಯು ಅಸಾಧಾರಣ ಪ್ರತಿಭೆ ಪ್ರದರ್ಶಿಸುವ ಮೂಲಕ ಮೂವರು ಉಗ್ರರನ್ನು ವಾಯುನೆಲೆ ಪ್ರವೇಶಿಸುವುದಕ್ಕೂ ಮುನ್ನವೇ ಹೊಡೆದುರುಳಿಸಲಾಗಿದೆ. ಉಳಿದ ಮೂವರು ಉಗ್ರರನ್ನು ಪ್ರತ್ಯೇಕಗೊಳಿಸಲಾಗಿದೆ ಎಂದು ತಿಳಿಸಿದೆ.
ಆತ್ಮಹತ್ಯಾ ಬಾಂಬರ್ಗಳ ದಾಳಿಯಲ್ಲಿ ವಾಯುನೆಲೆಯಲ್ಲಿ ನಿಲ್ಲಿಸಲಾಗಿದ್ದ ಮೂರು ಯುದ್ಧ ವಿಮಾನಗಳು ಹಾನಿಯಾಗಿವೆ. ಕೆಲ ಇಂಧನ ಟ್ಯಾಂಕರ್ಗಳು ಕೂಡ ಸುಟ್ಟು ಭಸ್ಮವಾಗಿವೆ ಎಂದು ಸೇನೆ ಹೇಳಿಕೊಂಡಿದೆ. ತೆಹ್ರೀಕ್-ಎ-ಜಿಹಾದ್ ಪಾಕಿಸ್ತಾನ ಭಯೋತ್ಪಾದಕ ಸಂಘಟನೆಯು ಈ ದಾಳಿ ಹೊಣೆ ಹೊತ್ತುಕೊಂಡಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…