ಉಪ್ಪಿನಂಗಡಿ: ಉಪ್ಪಿನಂಗಡಿ ಹಾಗೂ ನೆಕ್ಕಿಲಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಅಂಗಡಿ, ಪೆಟ್ರೋಲ್ ಬಂಕ್ ಗಳಲ್ಲಿ ಸರಣಿ ಕಳ್ಳತನ ನಡೆದಿರುವುದು ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ಗಾಂಧಿ ಪಾರ್ಕ್ ಬಳಿ ಜಗದೀಶ್ ನಾಯಕ್ ಎಂಬವರಿಗೆ ಸೇರಿದ ಟೈಲ್ಸ್ ಅಂಗಡಿಯ ಶಟರ್ ಬೀಗ ಮುರಿದು ಒಳನುಗ್ಗಿರುವ ಕಳ್ಳರು ಕ್ಯಾಶ್ ಡ್ರಾವರ್ ನಲ್ಲಿದ್ದ ಸುಮಾರು 20 ಸಾವಿರ ರೂ.ನಗದನ್ನು ಕದ್ದೊಯ್ದಿದ್ದಾರೆ. ಅಲ್ಲೇ ಪಕ್ಕದ ಗುಜಿರಿ ಅಂಗಡಿಗೂ ನುಗ್ಗಿದ ಕಳ್ಳರು ತಾಮ್ರದ ಬೆಲೆ ಬಾಳುವ ಸೊತ್ತುಗಳನ್ನು ಕಳವುಗೈದಿದ್ದಾರೆ. ಪಕ್ಕದ ಹೊಟೇಲೊಂದಕ್ಕೂ ನುಗ್ಗಿ ಅಲ್ಲಿಂದಲೂ ಹಣವನ್ನು ಕದ್ದೊಯ್ದಿದ್ದಾರೆ.
ಅದೇ ರೀತಿ 34 ನೆಕ್ಕಿಲಾಡಿಯ ಭಾರತ್ ಪೆಟ್ರೋಲ್ ಬಂಕ್ ಗೆ ನುಗ್ಗಿದ ಕಳ್ಳರು ಅಲ್ಲಿನ ಕ್ಯಾಶ್ ಡ್ರಾವರ್ ತೆರದು ಕಳವುಗೈದಿದ್ದಾರೆ. 34 ನೆಕ್ಕಿಲಾಡಿಯ ರವೀಂದ್ರ ಪ್ರಭು ಎಂಬವರಿಗೆ ಸೇರಿದ ಬೊಳ್ಳಾರ್ ಬಳಿಯಿರುವ ವೃಂದಾ ವೈಭವ್ ಗ್ಯಾಸ್ ಫಿಲ್ಲಿಂಗ್ ಸೆಂಟರ್ ನ ಎರಡು ಗಾಜಿನ ಬಾಗಿಲನ್ನು ಒಡೆದು ಒಳನುಗ್ಗಿದ್ದಾರೆ. ಒಡೆದು ಹಾಕಿದ ಗಾಜಿನ ಬಾಗಿಲಿನ ಮೌಲ್ಯ ಸುಮಾರು ಎರಡು ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಅಲ್ಲಿಂದ ದೇವರ ಮಂಟಪದಲ್ಲಿದ್ದ ಬೆಳ್ಳಿಯ ಚೆಂಬು, ನಗದನ್ನು ಕದ್ದೊಯ್ದಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…