ಕರಾವಳಿ

ಬರ ನಿರ್ವಹಣೆಗೆ ದ.ಕ. ಜಿಲ್ಲೆಗೆ 3 ಕೋ. ರೂ,ಉಡುಪಿಗೆ 4.50 ಕೋ. ರೂ. ಅನುದಾನ

ಉಡುಪಿ: ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆಯ ಕೊರತೆ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಲಕಂಟಕ ಎದುರಾಗಿದ್ದು ಬರಗಾಲ ಛಾಯೆ ಮೂಡಿದೆ. ಹೀಗಾಗಿ ಸರ್ಕಾರವು ರಾಜ್ಯದ 195 ತಾಲೂಕುಗಳನ್ನು ಬರ ಪೀಡಿತ ಪ್ರದೇಶ ಎಂದು ಈಗಾಗಲೇ ಘೋಷಣೆ ಮಾಡಿದೆ.

Advertisement
Advertisement
Advertisement

ಇದಕ್ಕಾಗಿ ಬರ ಪೀಡಿತ ತಾಲೂಕುಗಳ ನಿರ್ವಹಣೆಗಾಗಿ ಸರ್ಕಾರ ರಾಜ್ಯದ ಎಲ್ಲಾ ತಾಲೂಕುಗಳಿಗೆ ಅನುದಾನವನ್ನು ಬಿಡುಗಡೆಗೊಳಿಸಿ ಆದೇಶ ಮಾಡಿದೆ. ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೂ 3 ಕೋ.ರೂ. ಮೀಸಲಿಡಲಾಗಿದೆ. ಉಡುಪಿ ಜಿಲ್ಲಾ ಬರ ನಿರ್ವಹಣೆಗೆ 4.50ಕೋ.ರೂ ಬಿಡುಗಡೆ ಮಾಡಿದೆ.

ಬರ ತಾಲೂಕುಗಳಲ್ಲಿ ಕುಡಿಯುವ ನೀರು ಸಹಿತ ವಿವಿಧ ತುರ್ತು ಕಾಮಗಾರಿಗಳಿಗೆ ಈ ಅನುದಾನ ಬಳಕೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.

ಈ ಕುರಿತು ಪ್ರತಿಕ್ರಿಯಿಸಿದ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಉಡುಪಿ ಜಿಲ್ಲೆಯ ಬರ ನಿರ್ವಹಣೆ ಸಂಬಂಧ ಸರಕಾರದಿಂದ ಅನುದಾನ ಮಂಜೂರಾತಿಗೆ ಆದೇಶ ಆಗಿದ್ದು, ಇದರ ಪ್ರತಿ ಇನ್ನಷ್ಟೇ ಲಭ್ಯವಾಗವೇಕಿದೆ. ಅನುದಾನವನ್ನು ನಿರ್ದಿಷ್ಟ ಮಾನದಂಡದಂತೆ ವಿನಿಯೋಗ ಮಾಡಲಾಗುತ್ತದೆ. ಉಡುಪಿಯಲ್ಲಿ ತುರ್ತು ನಿರ್ವಹಣೆಗೆ ಸುಮಾರು ೧೨ ಕೋ. ರೂ ಸದ್ಯ ಲಭ್ಯವಿದೆ ಎಂದು ಹೇಳಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago