ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಕೆ.ಎಸ್.ಪ್ರತಿಮಾ (43ವರ್ಷ) ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನನ್ನು ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಬ್ಬ ಶಂಕಿತನನ್ನು ವಶಕ್ಕೆ ಪಡೆದಿರುವುದಾಗಿ ಬೆಂಗಳೂರು ಪೊಲೀಸರು ಸೋಮವಾರ (ನವೆಂಬರ್ 06) ಮಾಹಿತಿ ನೀಡಿದ್ದಾರೆ. ಪ್ರತಿಮಾ ಅವರ ಕಾರು ಚಾಲಕನನ್ನು ಸುಮಾರು ಹತ್ತು ದಿನಗಳ ಹಿಂದೆ ಕೆಲಸದಿಂದ ತೆಗೆದು ಹಾಕಲಾಗಿತ್ತು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ತಿಳಿಸಿದ್ದಾರೆ.
ಸರ್ಕಾರಿ ಗುತ್ತಿಗೆ ಆಧಾರದ ಮೇಲೆ ಕಳೆದ ಐದು ವರ್ಷಗಳಿಂದ ಈತ ಪ್ರತಿಮಾ ಅವರ ಕಾರು ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಪ್ರತಿಮಾ ಅವರು ದಾಳಿ ನಡೆಸಲು ತೆರಳುತ್ತಿದ್ದ ವ್ಯಕ್ತಿಗಳ ಕುರಿತ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದ ವಿಷಯ ಗಮನಕ್ಕೆ ಬಂದ ನಂತರ ಕಾರು ಚಾಲಕ ಕಿರಣ್ ಎಂಬಾತನನ್ನು ಕೆಲಸದಿಂದ ವಜಾ ಮಾಡಿದ್ದರು.
ಕೆಲಸದಿಂದ ವಜಾ ಮಾಡಿದ್ದಕ್ಕೆ ಪ್ರತೀಕಾರವಾಗಿ ಪ್ರತಿಮಾ ಅವರನ್ನು ಹತ್ಯೆ ಮಾಡಿರುವುದಾಗಿ ತನಿಖೆ ವೇಳೆ ಚಾಲಕ ಕಿರಣ್ ತಪ್ಪೊಪ್ಪಿಕೊಂಡಿರುವುದಾಗಿ ವರದಿ ವಿವರಿಸಿದೆ. ಘಟನೆ ನಂತರ ಕಿರಣ್ ಚಾಮರಾಜನಗರಕ್ಕೆ ಪರಾರಿಯಾಗಿದ್ದ ಎಂದು ವರದಿ ಹೇಳಿದೆ.
ಪ್ರತಿಮಾ ಅವರು ಶನಿವಾರ ರಾತ್ರಿ 8ರ ಸುಮಾರಿಗೆ ಕಾರು ಚಾಲಕ ಸಚಿನ್ ದೊಡ್ಡಸಂದ್ರದಲ್ಲಿರುವ ಮನೆಗೆ ಬಿಟ್ಟು ತೆರಳಿದ್ದರು. ಪ್ರತಿಮಾ ಅವರು ಮನೆ ಬಾಗಿಲು ತೆರೆದು ಒಳ ಹೋಗುತ್ತಿದ್ದಂತೆಯೇ ಹಿಂದಿನಿಂದ ದಾಳಿ ನಡೆಸಿ ಉಸಿರುಗಟ್ಟಿಸಿ, ನಂತರ ಮಾರಕಾಸ್ತ್ರದಿಂದ ಕತ್ತು ಸೀಳಿ ಕೊಲೆಗೈಯಲಾಗಿತ್ತು.
ಅಂದು ರಾತ್ರಿ ಪ್ರತಿಮಾ ಅವರ ಸಹೋದರ ಪ್ರತೀಶ್ ಹತ್ತಾರು ಬಾರಿ ಮೊಬೈಲ್ ಗೆ ಕರೆ ಮಾಡಿದ್ದರು. ಆದರೆ ಆಕೆ ಕರೆ ಸ್ವೀಕರಿಸಿರಲಿಲ್ಲವಾಗಿತ್ತು. ರವಿವಾರ ಬೆಳಗ್ಗೆ ಮತ್ತೆ ಕರೆ ಮಾಡಿದಾಗಲೂ ಪ್ರತಿಕ್ರಿಯೆ ಬಂದಿಲ್ಲವಾಗಿತ್ತು. ಇದರಿಂದ ಆತಂಕಗೊಂಡ ಪ್ರತೀಶ್ ಸಹೋದರಿಯ ಮನೆಗೆ ಬಂದಿದ್ದು, ಮನೆ ಬಾಗಿಲು ತೆರೆದಿರುವುದನ್ನು ಕಂಡು ಗಾಬರಿಯಾಗಿ ಒಳ ಹೋಗಿ ನೋಡಿದಾಗ ಬೆಡ್ ರೂಂನಲ್ಲಿ ಪ್ರತಿಮಾ ರಕ್ತದ ಮಡುವಿನಲ್ಲಿ ಬಿದ್ದಿದ್ದು ಕಂಡು ಬಂದಿತ್ತು. ನಂತರ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…