ಜಿಲ್ಲೆ

ಮನೆಗೆ ನುಗ್ಗಿ ವೃದ್ಧ ಮಹಿಳೆಗೆ ಹಲ್ಲೆಗೈದು ದರೋಡೆ: ಆರೋಪಿ ಬಂಧನ

ಮಡಿಕೇರಿ:ಜಿಲ್ಲಾ ಕೇಂದ್ರ ಮಡಿಕೇರಿಯ ಹೃದಯ ಭಾಗದ ಮನೆಯೊಂದರಲ್ಲಿದ್ದ ವೃದ್ಧ ಮಹಿಳೆಯ ಮೇಲೆ ಹಲ್ಲೆ ಮಾಡಿ ದರೋಡೆ ನಡೆಸಿದ ಘಟನೆ ನಡೆದು ಹನ್ನೆರಡು ಗಂಟೆ ಕಳೆಯುವಷ್ಟರಲ್ಲೆ, ಆರೋಪಿಯನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ (33) ಎಂದು ಗುರುತಿಸಲಾಗಿದ್ದು, ಈತನ ಬಳಿಯಲ್ಲಿದ್ದ 27 ಗ್ರಾಂನ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.

ನಗರದ ಐಡಿಬಿಐ ಬ್ಯಾಂಕ್ ಮುಂಭಾಗದ ಮನೆಯ ನಿವಾಸಿ, ಬಿ.ಇ.ಸಾಕಮ್ಮ ಪ್ರಭಾಕರ ಎಂಬವರ ಮೇಲೆ ಭಾನುವಾರ ಸಂಜೆ ಸುಮಾರು 6 ಗಂಟೆಯ ಹೊತ್ತಿಗೆ, ಮನೆಗೆ ಹಿಂಭಾಗದಿಂದ ಅಕ್ರಮವಾಗಿ ಪ್ರವೇಶಿಸಿದ ಆರೋಪಿ, ಸಾಕಮ್ಮ ಅವರ ಮೇಲೆ ಹಲ್ಲೆ ನಡೆಸಿ ಮಾಂಗಲ್ಯ ಸರ ಹಾಗೂ ಉಂಗುರವನ್ನು ದರೋಡೆ ಮಾಡಿದ್ದ.

ಪ್ರಕರಣವನ್ನು ಭೇದಿಸುವಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಎಎಸ್‌ಪಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago