ಕ್ರೀಡಾ ಸುದ್ದಿ

ವಿಶ್ವ ಕಪ್ :ಲಂಕಾ ವಿರುದ್ಧ ಬಾಂಗ್ಲಾಕ್ಕೆ ಜಯ

ನವ ದೆಹಲಿ: ಅಜ್ಮಲ್ ಹೊಸೈನ್​ ಶಾಂಟೊ (90) ಹಾಗೂ ನಾಯಕ ಶಕಿಬ್ ಅಲ್​ ಹಸನ್​ (82) ಜೋಡಿಯ ಅರ್ಧ ಶತಕಗಳ ನೆರವು ಪಡೆದ ಬಾಂಗ್ಲಾದೇಶ ತಂಡ ಶ್ರೀಲಂಕಾ ವಿರುದ್ಧ 3 ವಿಕೆಟ್​ಗಳ ಗೆಲುವು ಸಾಧಿಸಿದೆ.

Advertisement
Advertisement
Advertisement

ಅರುಣ್​ಜೇಟ್ಲಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ತಂಡದ ನಾಯಕ ಶಕಿಬ್ ಅಲ್​ ಹಸನ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡ 49.3 ಓವರ್​ಗಳಲ್ಲಿ 279 ರನ್​ ಬಾರಿಸಿತು. ಇದಕ್ಕೆ ಪ್ರತಿಯಾಗಿ ಆಡಿದ ಬಾಂಗ್ಲಾ ಹುಲಿಗಳು ಇನ್ನೂ 53 ಎಸೆತಗಳು ಬಾಕಿ ಇರುವಂತೆಯೇ 7 ವಿಕೆಟ್​ ಕಳೆದುಕೊಂಡು 282 ರನ್ ಬಾರಿಸಿ ಜಯ ಸಾಧಿಸಿತು.

ಲಂಕಾ ತಂಡ ಬ್ಯಾಟಿಂಗ್​ನಲ್ಲಿ ಉತ್ತಮ ಆರಂಭ ಪಡೆಯಲಿಲ್ಲ. ಸತತವಾಗಿ ವಿಕೆಟ್​ ಕಳೆದುಕೊಳ್ಳುವ ಮೂಲಕ ಎದುರಾಳೀ ತಂಡದ ಬೌಲರ್​ಗಳಿಗೆ ಭರ್ಜರಿ ಮುನ್ನಡೆ ಪಡೆಯಲು ಅನುಕೂಲ ಮಾಡಿಕೊಟ್ಟರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಚರಿತ್ ಅಸಲಂಕಾ(108 ರನ್) ಉತ್ತಮವಾಗಿ ಬ್ಯಾಟ್​ ಬೀಸುವ ಮೂಲಕ ತಂಡಕ್ಕೆ ಆಧಾರವಾದರು. ಅವರ ಶತಕದ ನೆರವಿನಿಂದ ಲಂಕಾ ತಂಡಕ್ಕೆ ಸ್ಪರ್ಧಾತ್ಮಕ ಮೊತ್ತವನ್ನು ಪೇರಿಸಲು ಸಾಧ್ಯವಾಯಿತು. ಸದೀರ ಸಮರ ವಿಕ್ರಮ 41 ರನ್ ಬಾರಿಸಿದರೆ, ಧನಂಜಯ ಡಿಸಿಲ್ವಾ 34 ರನ್​ ರನ್ ಬಾರಿಸಿದರು.

ಬಾಂಗ್ಲಾದೇಶದ ಪರ ತಂಜಿಮ್ ಹಸನ್​ 3 ವಿಕೆಟ್ ಪಡೆದರೆ ಶೊರಿಫುಲ್ ಇಸ್ಲಾಂ ಮತ್ತು ಶಕಿಬ್​ ಅಲ್​ ಹಸನ್ ತಲಾ ಒಂದು ವಿಕೆಟ್ ಉರುಳಿಸಿದರು.

ಸ್ಪರ್ಧಾತ್ಮಕ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ಲಂಕಾ ಬಾಂಗ್ಲಾದೇಶ ತಂಡ 66 ರನ್​ಗಳಿಗೆ ಮೊದಲೆರಡು ವಿಕೆಟ್​ಗಳನ್ನು ಕಳೆದುಕೊಂಡಿತು. ಆದರೆ ಆ ಬಳಿಕ ಶಾಂಟೊ ಹಾಗೂ ಶಕಿಬ್ ಶತಕದ ಜತೆಯಾಟವಾಡಿದರು. ಮಹಮದುಲ್ಲಾ 22 ರನ್ ಬಾರಿಸಿದರೆ ಕೊನೆಯಲ್ಲಿ ತೌಹಿದ್​ 15 ರನ್ ಕೊಡುಗೆ ಕೊಟ್ಟರು.

AddThis Website Tools
ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago