ಕರಾವಳಿ

ಲಾಟರಿ ಆಮಿಷ: 72.86 ಲ.ರೂ. ವಂಚನೆ

ಮಂಗಳೂರು: ಲಾಟರಿ ಹಣ ಬಂದಿರುವುದಾಗಿ ತಿಳಿಸಿ ಖಾತೆಯಿಂದ 72.86 ಲ.ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ನಡೆದಿದೆ.

Advertisement
Advertisement
Advertisement

ಸತ್ಯಂ ಪಾಂಡೆ ಮತ್ತು ಮಿತ್ತಲ್‌ ಎಂಬ ಹೆಸರಿನಿಂದ ಪರಿಚಯಿಸಿಕೊಂಡ ಅಪರಿಚಿತರಿಬ್ಬರು ವಾಟ್ಸ್‌ ಆಯಪ್‌ ಮೂಲಕ ದೂರುದಾರರೊಂದಿಗೆ ಮಾತನಾಡಿದ್ದರು.

ಅನಂತರ ವಾಟ್ಸ್‌ ಆಯಪ್‌ನಲ್ಲಿ ನಿರಂತರವಾಗಿ ಸಂಪರ್ಕದಲ್ಲಿದ್ದರು. ಒಂದು ದಿನ ದೂರುದಾರರಿಗೆ ಲಾಟರಿ ಹಣ ಬಂದಿರುವುದಾಗಿ, ಆ ಹಣವನ್ನು ಖಾತೆಗೆ ಜಮಾ ಮಾಡುವುದಾಗಿ, ಜಮಾ ಮಾಡಲು ತಾವು ನೀಡುವ 9038910423 ಸಂಖ್ಯೆಯನ್ನು ಬ್ಯಾಂಕ್‌ ಖಾತೆಗಳಿಗೆ ಲಿಂಕ್‌ ಮಾಡುವಂತೆ ತಿಳಿಸಿದ್ದರು. ಇದನ್ನು ನಂಬಿದ ದೂರುದಾರರು ತಮ್ಮ ಬ್ಯಾಂಕ್‌ ಖಾತೆಗಳಿಗೆ ಆ ಮೊಬೈಲ್‌ ಸಂಖ್ಯೆಯನ್ನು ಲಿಂಕ್‌ ಮಾಡಿಸಿದ್ದರು.

ಇದಾದ ಅನಂತರ ದೂರುದಾರರಿಗೆ ನಿವೃತ್ತಿಯಿಂದ ಬರಬೇಕಾದ ಹಣ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಖಾತೆಗೆ ಅ. 26ರಂದು 50,55,118 ರೂ. ಮತ್ತು ಅ. 31ರಂದು ಇಂಡಿಯನ್‌ ಬ್ಯಾಂಕ್‌ ಖಾತೆಗೆ 22,31,798 ರೂ.ಗಳು ಬಂದಿತ್ತು. ಆ ಬಳಿಕ ಅಪರಿಚಿತ ವ್ಯಕ್ತಿಗಳು ದೂರುದಾರರ ಗಮನಕ್ಕೆ ತಾರದೆ ಅ. 26ರಿಂದ ನ. 2ರ ನಡುವೆ 72,86,916 ರೂ. ಅನಧಿಕೃತವಾಗಿ ಆನ್‌ಲೈನ್‌ ಮೂಲಕ ವರ್ಗಾಯಿಸಿ ವಂಚಿಸಿದ್ದಾರೆ.

ಮಂಗಳೂರಿನ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago