ಟೆಲ್ ಅವೀವ್: ಪ್ಯಾಲೆಸ್ತೇನ್ ಕಾರ್ಮಿಕರ ಬದಲು ಭಾರತದ ಕಾರ್ಮಿಕರನ್ನು ನೇಮಿಸಿಕೊಳ್ಳಲು ಇಸ್ರೇಲ್ ಈಗ ಮುಂದಾಗಿದೆ.
ಹಮಾಸ್ ಜೊತೆಗಿನ ಯುದ್ಧದ ನಂತರ 90 ಸಾವಿರ ಪ್ಯಾಲೆಸ್ತೇನ್ ಕಾರ್ಮಿಕರ ಕೆಲಸದ ಪರವಾನಗಿಯನ್ನು ರದ್ದುಗೊಳಿಸಲಾಗಿದೆ. ಈಗ ಪ್ಯಾಲೆಸ್ತೇನ್ ಪ್ರಜೆಗಳ ಬದಲಿಗೆ 1 ಲಕ್ಷ ಭಾರತೀಯ ಕಾರ್ಮಿಕರನ್ನು ನೇಮಿಸಿಕೊಳ್ಳಲು ಕಂಪನಿಗಳಿಗೆ ಅನುಮತಿ ನೀಡುವಂತೆ ಇಸ್ರೇಲಿ ನಿರ್ಮಾಣ ಉದ್ಯಮವು ಸರ್ಕಾರವನ್ನು ಕೇಳಿದೆ ಎಂದು ವರದಿಯಾಗಿದೆ.
ಮೇ ತಿಂಗಳಲ್ಲಿ ಇಸ್ರೇಲ್ ಭಾರತದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಇಸ್ರೇಲ್ 42 ಸಾವಿರ ಭಾರತೀಯರಿಗೆ ಇಸ್ರೇಲ್ನಲ್ಲಿ ಕೆಲಸ ಮಾಡಲು ಅವಕಾಶ ನೀಡುತ್ತದೆ. ನಿರ್ಮಾಣ ಮತ್ತು ನರ್ಸಿಂಗ್ ಕ್ಷೇತ್ರಗಳಲ್ಲಿ 42 ಸಾವಿರ ಭಾರತೀಯ ಕಾರ್ಮಿಕರಿಗೆ ಉದ್ಯೋಗಕ್ಕೆ ಅನುಮತಿ ನೀಡುವ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.
ತಮ್ಮ ದೇಶದ ಮೇಲಿನ ದಾಳಿ ದೇಶದಲ್ಲಿ ಉದ್ಯೋಗದಲ್ಲಿದ್ದ ಪ್ಯಾಲೆಸ್ತೀನ್ ಕಾರ್ಮಿಕರು ಕಾರಣ. ಅವರು ನಮ್ಮ ದೇಶದ ಬಗ್ಗೆ ಹಮಾಸ್ ಉಗ್ರರಿಗೆ ಮಾಹಿತಿ ನೀಡಿದ್ದರು ಎಂಬ ಕಾರಣ ನೀಡಿ ಇಸ್ರೇಲ್ ಕಳೆದ ವಾರ ಗಾಜಾಗೆ ಗಡಿಪಾರು ಮಾಡಿದೆ.
ಪ್ಯಾಲೆಸ್ತೇನ್ ಜೊತೆಗಿನ ಸಂಬಂಧ ಸುಧಾರಣೆಯಾಗುತ್ತಿದ್ದಂತೆ ಇಸ್ರೇಲ್ ಪ್ಯಾಲೆಸ್ತೇನ್ ಪ್ರಜೆಗಳಿಗೆ ಮಾನವೀಯ ದೃಷ್ಟಿಯಿಂದ ಕೆಲ ವರ್ಷಗಳಿಂದ ದೇಶದಲ್ಲಿ ಉದ್ಯೋಗ ನೀಡಿತ್ತು. ಉದ್ಯೋಗ ಪಡೆದ ಪ್ರಜೆಗಳು ಹಮಾಸ್ ಉಗ್ರರ ಜೊತೆ ಕೈ ಜೋಡಿಸಿದ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಅವರನ್ನು ಇಸ್ರೇಲ್ ಗಡಿಪಾರು ಮಾಡಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…