ಶೀಘ್ರದಲ್ಲೇ ಮಂಗಳೂರಿಗೆ ಬರಲಿದೆ ‘ವಂದೇ ಭಾರತ್ ರೈಲು’: ನಳಿನ್ ಕುಮಾರ್ ಕಟೀಲ್

By: Ommnews

Date:

Share post:

ಮಂಗಳೂರು: ಬೆಂಗಳೂರಿನಿಂದ -ಕರಾವಳಿಗೆ “ವಂದೇ ಭಾರತ್‌” ರೈಲು ಸೇವೆಯನ್ನು ವಿಸ್ತರಿಸಬೇಕೆಂಬುದು ಈ ಭಾಗದ ಜನರ ಬಹು ದಿನಗಳ ಬೇಡಿಕೆಯಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರಕಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

Advertisement
Advertisement
Advertisement

ಈ ಬಗ್ಗೆ ನಳಿನ್ x ಖಾತೆಯಲ್ಲಿ ” ಮಂಗಳೂರು – ಮಡಗಾಂ ವಂದೇ ಭಾರತ್ ರೈಲು ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು, ವೇಳಾಪಟ್ಟಿ ಯಾವುದೇ ಕ್ಷಣದಲ್ಲಿಯೂ ಬಿಡುಗಡೆಯಾಗಲಿದೆ. ಇನ್ನು ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲಿಗಾಗಿ ಮಾಡಿದ ಮನವಿ ಫಲಪ್ರದವಾಗಿದ್ದು, ಶೀಘ್ರದಲ್ಲಿ ಅದು ಕೂಡ ಈಡೇರಲಿದೆ. ಈ ಸಿಹಿಸುದ್ದಿಗಾಗಿ ಜಿಲ್ಲೆಯ ನಾಗರಿಕರ ಪರವಾಗಿ ಕೇಂದ್ರ ಸರಕಾರಕ್ಕೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಕಾಸರಗೋಡು – ತಿರುವನಂತಪುರಂ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಮಂಗಳೂರಿನ ತನಕ ವಿಸ್ತರಣೆ ಮಾಡಲು ಒತ್ತಾಯ ಕೇಳಿಬಂದಿತ್ತು. ಅಲ್ಲದೇ ರೈಲ್ವೆ ಇಲಾಖೆಯ ಮುಂದೆ ಮಂಗಳೂರು-ಮಡಗಾಂವ್, ಮಂಗಳೂರು-ಎರ್ನಾಕುಲಂ ನಡುವೆ ವಂದೇ ಭಾರತ್ ರೈಲು ಸಂಚಾರ ನಡೆಸುವ ಪ್ರಸ್ತಾವನೆ ಇತ್ತು.

ಆದರೆ ಈಗ ಸಂಸದರು ಮಾಡಿರುವ ಟ್ವೀಟ್ ಅನ್ವಯ ಮಡಗಾಂವ್-ಮಂಗಳೂರು ನಡುವೆ ಹೊಸ ವಂದೇ ಭಾರತ್ ರೈಲು ಸಂಚಾರ ಶೀಘ್ರವೇ ಆರಂಭವಾಗಲಿದೆ. ಜೊತೆಗೆ ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಓಡಿಸಬೇಕು ಎಂಬ ಕರಾವಳಿ ಭಾಗದ ಜನರು ಬೇಡಿಕೆಯೂ ಇಡೇರುವ ಲಕ್ಷಣ ಗೋಚರಿಸುತ್ತಿದೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section