ಕರಾವಳಿ

ಸೌಜನ್ಯ ರೇಪ್ & ಮರ್ಡರ್ ಕೇಸ್- ಸಂತೋಷ್ ರಾವ್‍ನೇ ಆರೋಪಿ ಅಂತ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಪಾಂಗಳ ನಿವಾಸಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇಂದ್ರೀಯ ತನಿಖಾ ದಳವು ಹೈಕೋರ್ಟ್ ಮೆಟ್ಟಿಲೇರಿದೆ.

Advertisement
Advertisement
Advertisement

ನಾಲ್ಕು ತಿಂಗಳ ಬಳಿಕ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸಿಬಿಐ, ಹೈಕೋರ್ಟ್ ಮೆಟ್ಟಿಲೇರಿದೆ. ಕರ್ನಾಟಕ ಹೈಕೋರ್ಟಿನಲ್ಲಿ ತೀರ್ಪು ಮರು ಪರಿಶೀಲನೆ ಮಾಡುವಂತೆ ಸಿಬಿಐ ಮೇಲ್ಮನವಿ ಸಲ್ಲಿಸಿದೆ.

ಕಾಲೇಜು ವಿದ್ಯಾರ್ಥಿನಿ ಸೌಜನ್ಯಳನ್ನು ಅಪಹರಿಸಿ, ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. ಬಳಿಕ 2012ರ ಅಕ್ಟೋಬರ್ 10 ರಂದು ಧರ್ಮಸ್ಥಳ ಬಳಿಯ ಪಾಂಗಳ ಬಳಿ ಸೌಜನ್ಯ ಮೃತದೇಹ ಪತ್ತೆಯಾಗಿತ್ತು. ಪ್ರಕರಣ ಸಂಬಂಧ ಆರೋಪಿ ಸಂತೋಷ್ ರಾವ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಬಳಿಕ ಪೊಲೀಸರು ಸರಿಯಾಗಿ ತನಿಖೆ ನಡೆಸಿಲ್ಲ ಎಂಬ ಆರೋಪ ವ್ಯಕ್ತವಾಗಿತ್ತು. ಹೀಗಾಗಿ ಹಲವು ಹೋರಾಟಗಳ ಬಳಿಕ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಾಗಿತ್ತು.

11 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಸಿಬಿಐ ವಿಶೇಷ ಕೋರ್ಟ್ 2023ರ ಜೂನ್ 16ರಂದು ತೀರ್ಪು ನೀಡಿತ್ತು. ಆರೋಪಿ ಸಂತೋಷ್ ರಾವ್ ನಿರ್ದೋಷಿ ಎಂದು ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿತ್ತು. ಸಿಬಿಐ ಅಧಿಕಾರಿಗಳು ಸಂತೋಷ್ ರಾವ್ ವಿರುದ್ಧದ ಆರೋಪ ಸಾಬೀತು ಪಡಿಸಲು ವಿಫಲ ಎಂದು ಕೋರ್ಟ್ ಹೇಳಿತ್ತು. ಹೀಗಾಗಿ ಸಂತೋಷ್ ರಾವ್ ನಿರಾಪರಾಧಿ ಎಂದು ಬಿಡುಗಡೆ ಮಾಡಿತ್ತು. ಆ ಬಳಿಕ ಮೇಲ್ಮನವಿ ಸಲ್ಲಿಸಲು ಸಿಬಿಐಗೆ 60 ದಿನಗಳ ಕಾಲಾವಕಾಶ ಇತ್ತು. ಆದರೆ ಇದೀಗ ಅವಧಿ ಮುಗಿದ ಮೇಲೆ ನಾಲ್ಕು ತಿಂಗಳ ಬಳಿಕ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ.

ವಿಶೇಷ ಕೋರ್ಟ್ ತೀರ್ಪು ಪ್ರಶ್ನಿಸಿ ಮರುಪರಿಶೀಲನೆಗೆ ಹಾಗೂ ಸಂತೋಷ್ ರಾವ್ ನೇ ಆರೋಪಿ ಅಂತ ಸಿಬಿಐ ಮೇಲ್ಮನವಿ ಸಲ್ಲಿಸಿದೆ. ಒಂದೆಡೆ ಸೌಜನ್ಯ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದೆ. ಆದರೆ ಸಿಬಿಐ ಕಾರಣಕ್ಕೆ ಮರು ತನಿಖೆ ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಇನ್ನೊಂದೆಡೆ ಸೌಜನ್ಯ ಮನೆಯವರೂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿಲ್ಲ. ಈ ಬೆಳವಣಿಗೆಗಳ ಬೆನ್ನಲ್ಲೇ ಸಿಬಿಐ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ಸಿಬಿಐ ಸಲ್ಲಿಸಿರುವ ಮೇಲ್ಮನವಿಯನ್ನು ಹೈಕೋರ್ಟ್ ಅಂಗೀಕರಿಸುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago