ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ನ್ಯೂಜಿಲೆಂಡ್ 5 ವಿಕೆಟ್ಗಳಿಂದ ಮಣಿಸಿತು.
ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಲಂಕಾ ತಂಡ 46.4 ಓವರ್ಗಳಲ್ಲಿ 171 ರನ್ಗಳಿಗೆ ಆಲ್ಔಟ್ ಆಯಿತು. ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ಇನ್ನೂ 160 ಬಾಕಿ ಇರುವಂತೆಯೇ 5 ವಿಕೆಟ್ ಕಳೆದುಕೊಂಡು 172 ರನ್ ಬಾರಿಸಿ ಗೆಲುವು ಸಾಧಿಸಿತು.
ಸಾಧಾರಣ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ 25 ಓವರ್ಗಳ ಒಳಗೆ ಆಟ ಮುಗಿಸಿ ಗರಿಷ್ಠ ರನ್ರೇಟ್ನೊಂದಿಗೆ ಆಡಿತು. ಪೂರಕವಾಗಿ ಮೊದಲ ವಿಕೆಟ್ಗೆ 86 ರನ್ ಬಾರಿಸಿತು. ಆರಂಭಿಕ ಬ್ಯಾಟರ್ಗಳಾದ ಡೆವೋನ್ ಕಾನ್ವೆ (45) ಹಾಗೂ ರಚಿನ್ ರವೀಂದ್ರ (42) ಉತ್ತಮ ಆರಂಭ ತಂದುಕೊಟ್ಟರು. ಆದರೆ, ಈ ಇಬ್ಬರು ಬ್ಯಾಟಿಂಗ್ನಲ್ಲಿ ಇನ್ನಷ್ಟು ಬಿರುಸು ತರಲು ಹೋಗಿ ಔಟಾದರು. ಬಳಿಕ ಕೇನ್ ವಿಲಿಮ್ಸನ್ 14 ರನ್ ಕೊಡುಗೆ ಕೊಟ್ಟರು. ಡ್ಯಾರಿಲ್ ಮಿಚೆಲ್ ಗುರಿಯನ್ನು ಬೇಗ ಮುಟ್ಟುವ ಉದ್ದೇಶದಿಂದ 31 ಎಸೆತಕ್ಕೆ 43 ರನ್ ಬಾರಿಸಿದರು. ಮಾರ್ಕ್ ಚಾಪ್ಮನ್ ಅನಗತ್ಯ ರನ್ಔಟ್ಗೆ ಬಲಿಯಾದರು. ಕೊನೆಯಲ್ಲಿ ಗ್ಲೆನ್ ಫಿಲಿಪ್ಸ್ 17 ರನ್ ಬಾರಿಸಿ ತಂಡಕ್ಕೆ ಜಯ ತಂದುಕೊಟ್ಟರು.
ಲಂಕಾ ತಂಡ 32 ರನ್ಗಳಿಗೆ ಮೊದಲ 3 ವಿಕೆಟ್ ನಷ್ಟಮಾಡಿಕೊಂಡಿತು. ಪಾಥುಮ್ ನಿಸ್ಸಾಂಕ 2 ರನ್ಗೆ ಔಟಾದರೆ, ಕುಸಾಲ್ ಮೆಂಡಿಸ್ 6 ಮತ್ತು ಸದೀರಾ ಸಮರವಿಕ್ರಮ 1 ರನ್ ಬಾರಿಸಿ ಪೆವಿಲಿಯನ್ ಹಾದಿ ಹಿಡಿದರು. ಆದರೆ, ಮತ್ತೊಬ್ಬ ಆರಂಭಿಕ ಬ್ಯಾಟರ್ ಕುಸಾಲ್ ಪೆರೆರಾ 28 ಎಸೆತಗಳಲ್ಲಿ 51 ರನ್ ಬಾರಿಸಿದರು.
ಲಂಕಾ ಮಧ್ಯಮ ಕ್ರಮಾಂಕದ ಬ್ಯಾಟರ್ಗಳೂ ತಂಡಕ್ಕೆ ಹೆಚ್ಚು ನೆರವಾಗಲಿಲ್ಲ. ಮ್ಯಾಥ್ಯೂಸ್ 16 ರನ್ ಬಾರಿಸಿದರೆ, ಧನಂಜಯ ಡಿಸಿಲ್ವಾ 19 ರನ್ಗೆ ಔಟಾದರು. ಚಾಮಿಕಾ ಕರುಣಾರತ್ನೆ 6 ರನ್ಗೆ ಸೀಮಿತಗೊಂಡರು. ಆದರೆ, ಸ್ಪಿನ್ನರ್ ಮಹೀಶ್ ತೀಕ್ಷಣಾ 91 ಎಸೆತಗಳನ್ನು ಎದುರಿಸಿ 38 ರನ್ ಬಾರಿಸಿದರು. ಕೊನೆಯಲ್ಲಿ ಮಧು ಶಂಕಾ 19 ರನ್ ಕೊಡುಗೆ ಕೊಟ್ಟರು. ಈ ಜೋಡಿ 10ನೇ ವಿಕೆಟ್ಗೆ 43 ರನ್ ಬಾರಿಸಿದ ಕಾರಣ ತಂಡಕ್ಕೆ ಸ್ವಲ್ಪ ನೆರವಾಯಿತು.
ನ್ಯೂಜಿಲೆಂಡ್ ಪರ ಬೌಲ್ಟ್ 3, ಫರ್ಗ್ಯೂಸನ್, ಸ್ಯಾಂಟ್ನರ್ ಹಾಗೂ ರಚಿನ್ ರವೀಂದ್ರ ತಲಾ ಎರಡು ವಿಕೆಟ್ ಉರುಳಿಸಿದರು.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…