ತಂತ್ರಜ್ಞಾನ

ಯೂಟ್ಯೂಬ್ ನಂತೆ ವಾಟ್ಸಾಪ್ ನಲ್ಲಿಯೂ ಬರಲಿದೆ ಜಾಹಿರಾತು!

ಕ್ಯಾಲಿಫೋರ್ನಿಯಾ: ವಿಶ್ವದಾದ್ಯಂತ ಎರಡು ಬಿಲಿಯನ್ ಗೂ ಹೆಚ್ಚು ಸಕ್ರಿಯ ಬಳಕೆದಾರರನ್ನು ಹೊಂದಿರುವ ಜನಪ್ರಿಯ ಮೆಸ್ಸೇಜಿಂಗ್ ಆಯಪ್ ವಾಟ್ಸಾಪ್ ಸದಾ ಹೊಸ ಹೊಸ ಫೀಚರ್ ಗಳನ್ನು ಅಪ್ಡೇಟ್ ಮಾಡುತ್ತಿರುತ್ತದೆ. ಆರಂಭದಲ್ಲಿ ಕೇವಲ ಸಂದೇಶ ಕಳುಹಿಸಲು ಬಳಕೆಯಾಗುತ್ತಿದ್ದ ವಾಟ್ಸಪ್ ಇದೀಗ ಚಾನೆಲ್ ಗಳನ್ನು ಹೊಂದಿದೆ.

Advertisement
Advertisement
Advertisement

ಯೂಟ್ಯೂಬ್ ಗಳಲ್ಲಿ ಇದ್ದಂತೆ ವಾಟ್ಸಪ್ ನಲ್ಲಿಯೂ ಜಾಹೀರಾತುಗಳು ಕಾಣಿಸಲಿದೆ. ವಾಟ್ಸಪ್ ಸ್ಟೇಟಸ್ ಮತ್ತು ಚಾನೆಲ್ ಗಳಲ್ಲಿ ಜಾಹೀರಾತುಗಳನ್ನು ತರಲು ಸಂಸ್ಥೆ ಮುಂದಾಗಿದೆ. ಅಲ್ಲದೆ ಇದೇ ಸಮಯದಲ್ಲಿ ಹೊಸ ವಾಯ್ಸ್ ಮೆಸೇಜ್ ಮತ್ತು ಸ್ಟಿಕ್ಕರ್ ಫೀಚರ್ ಗಳನ್ನು ಅಭಿವೃದ್ಧಿಪಡಿಸುತ್ತಿದೆ. ಇದು ಕಂಪನಿಯು ತನ್ನ ಹಣಗಳಿಕೆಯ ತಂತ್ರಗಳನ್ನು ವಿಸ್ತರಿಸುವ ಮತ್ತು ಬಳಕೆದಾರರ ಅನುಭವವನ್ನು ಹೆಚ್ಚಿಸುವ ಉದ್ದೇಶವನ್ನು ಸೂಚಿಸುತ್ತವೆ.

ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ ವಾಟ್ಸಪ್ ಸಿಇಒ ವಿಲ್ ಕ್ಯಾತ್ ಕಾರ್ಟ್, ಸ್ಟೇಟಸ್ ಮತ್ತು ಚಾನೆಲ್‌ ಗಳಲ್ಲಿನ ಜಾಹೀರಾತುಗಳ ಸಂಭಾವ್ಯತೆಯ ಬಗ್ಗೆ ಸುಳಿವು ನೀಡಿದರು. ಮೆಸೇಜ್ ಕಳುಹಿಸುವ ಇನ್‌ ಬಾಕ್ಸ್‌ ಗೆ ಜಾಹೀರಾತುಗಳು ನುಗ್ಗುವುದಿಲ್ಲ ಎಂದು ಅವರು ಒತ್ತಿಹೇಳಿದರು. ಬದಲಾಗಿ, ಇವು ಪ್ರಾಥಮಿಕವಾಗಿ ಪಬ್ಲಿಕ್ ಬ್ರಾಡ್ ಕಾಸ್ಟಿಂಗ್ ಮತ್ತು ಗುಂಪು ಚರ್ಚೆಗಳಿಗೆ ಮೀಸಲಾಗಿರುವ ವಿಭಾಗಗಳಲ್ಲಿ ಜಾಹೀರಾತುಗಳು ಕಾಣಿಸಿಕೊಳ್ಳಬಹುದು.

ಜಾಹೀರಾತು ಮಾತ್ರವಲ್ಲದೆ ವಾಟ್ಸಪ್ ಹೊಸ ಫೀಚರ್ ಗಳಾದ ವಾಯ್ಸ್ ಮೆಸ್ಸೇಜಿಂಗ್ ಮತ್ತು ಸ್ಟಿಕ್ಕರ್ ಗಳ ಮೇಲೆ ಕೆಲಸ ಮಾಡುತ್ತಿದೆ. ಕಂಪನಿಯು ಬಳಕೆದಾರರಿಗೆ ವಾಯ್ಸ್ ರೆಕಾರ್ಡಿಂಗನ್ನು ಪಾಸ್ ಮಾಡಲು ಮತ್ತು ಪುನರಾರಂಭಿಸಲು ಅನುವು ಮಾಡಿಕೊಡುವ ವೈಶಿಷ್ಟ್ಯದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ವರದಿಯಾಗಿದೆ, ಜೊತೆಗೆ ವಾಯ್ಸ್ ಮೆಸೇಜ್ ಗಳಿಗೆ ಸ್ಟಿಕ್ಕರ್‌ ಗಳನ್ನು ಸೇರಿಸುವ ಬಗ್ಗೆ ಕೆಲಸ ಮಾಡಲಾಗುತ್ತದೆ.

ಜಾಹೀರಾತುಗಳ ಪರಿಚಯ ಮತ್ತು ಹೊಸ ಫೀಚರ್ ಗಳ ಅಭಿವೃದ್ಧಿಯು ಬಳಕೆದಾರ ಸ್ನೇಹಿ ಅನುಭವವನ್ನು ಉಳಿಸಿಕೊಂಡು ಅದರ ಆದಾಯದ ದಾರಿಗಳನ್ನು ಹೆಚ್ಚುಗೊಳಿಸಲು ವಾಟ್ಸಪ್ ನಡೆಯುತ್ತಿರುವ ಪ್ರಯತ್ನಗಳನ್ನು ಸೂಚಿಸುತ್ತದೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago