ಜಿಲ್ಲೆ

ಮಿಷನ್ ಗ್ರಾಮ ಪಂಚಾಯತ್ 500 ಯೋಜನೆ ರಾಜ್ಯಾದಂತ ವಿಸ್ತರಣೆ : ಡಾ.ಜಿ.ಪರಮೇಶ್ವರ್

ಕೊರಟಗೆರೆ: ಬರಗಾಲದಿಂದ ರೈತಾಪಿವರ್ಗ ಮತ್ತು ಬಡಜನತೆ ಗುಳೆ ಹೋಗದಂತೆ ತಡೆಯಲು ತುಮಕೂರು ಜಿಲ್ಲೆಯಲ್ಲಿ ಮಿಷನ್ ಗ್ರಾಪಂ-500 ನರೇಗಾ ಆಸರೆ ಯೋಜನೆ ಜಾರಿಗೆ ತರಲು ರೂಪುರೇಷೆ ಸಿದ್ದವಾಗಿದೆ. ಕರ್ನಾಟಕ ರಾಜ್ಯದ 31 ಜಿಲ್ಲೆಗಳಲ್ಲೂ ಗ್ರಾಪಂ-500 ಯೋಜನೆ ವಿಸ್ತರಣೆಗೆ ಸರಕಾರದ ಜತೆ ಮಾತುಕತೆ ನಡೆಸಲಾಗಿದೆ.

Advertisement
Advertisement
Advertisement

ಗುಳೆ ತಡೆಯಲು ಈ ಯೋಜನೆ ರೈತರಿಗೆ ಸಹಕಾರಿ ಆಗಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.

ಕೊರಟಗೆರೆ ಪಟ್ಟಣದ ಪಟ್ಟಣ ಪಂಚಾಯಿತಿ ಕಾರ್ಯಯಲದಲ್ಲಿ ತುಮಕೂರು ಜಿಲ್ಲಾಡಳಿತ ಮತ್ತು ಕೊರಟಗೆರೆ ತಾಲೂಕು ಆಡಳಿತದ ವತಿಯಿಂದ ಗೃಹಸಚಿವ ಡಾ.ಜಿ.ಪರಮೇಶ್ವರ ಅಧ್ಯಕ್ಷತೆಯಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಬರ ಪರಿಸ್ಥಿತಿ ಮತ್ತು ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಗ್ರಾಪಂ-500 ಯೋಜನೆಯಡಿ ನರೇಗಾ ಮತ್ತು ಸರಕಾರ ಅನುಧಾನ ಲಭ್ಯ ಇರಲಿದೆ. ಸರಕಾರಿ ಶಾಲೆ ಮತ್ತು ಅಂಗನವಾಡಿ ಕೇಂದ್ರ ಕೌಪೌಂಡು, ಶೌಚಾಲಯ, ಕೊಠಡಿ, ಆಟದ ಮೈದಾನಕ್ಕೆ ಪ್ರಮುಖ ಪ್ರಾಮುಖ್ಯತೆ ನೀಡಲಾಗಿದೆ. ಉಳಿದಂತೆ ಇತರೇ ಕಾಮಗಾರಿಗಳಿಗೆ ಆಧ್ಯತೆ ನೀಡಲು ಸೂಚಿಸಿದ್ದೇನೆ. ರೈತಾಪಿವರ್ಗ ತಮ್ಮ ಊರನ್ನು ಬಿಟ್ಟು ಗುಳೆ ಹೋಗಬಾದ್ರು. ನರೇಗಾ ಯೋಜನೆ ಮತ್ತು ಸರಕಾರದ ಸೌಲಭ್ಯ ನೀಡಲು ಸರಕಾರ ಬದ್ದವಾಗಿದೆ ಎಂದು ಭರವಸೆ ನೀಡಿದರು.

ಬರಗಾಲದಿಂದ ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ 37 ಸಾವಿರ ಕೋಟಿಗೂ ಅಧಿಕ ಬೆಳೆನಷ್ಟ ಆಗಿದೆ. ಕೇಂದ್ರ ಸರಕಾರಕ್ಕೆ17 ಸಾವಿರ ಕೋಟಿ ನೀಡುವಂತೆ ರಾಜ್ಯ ಸರಕಾರ ಪ್ರಸ್ತಾವನೆ ಸಲ್ಲಿಸಿದೆ. ಕೇಂದ್ರ ಸರಕಾರಕ್ಕೆ ಇಲ್ಲಿಯವರ್ಗೆ ನಯಪೈಸೆಯು ಬಿಡುಗಡೆ ಮಾಡಿಲ್ಲ. ಪ್ರಧಾನಿ ಮೋದಿಯವ್ರು ತತ್ ಕ್ಷಣ ಬರಗಾಲದ ಅನುಧಾನ ಬಿಡುಗಡೆ ಮಾಡಿ ರೈತರ ಪರವಾಗಿ ನಿಲ್ಲಬೇಕಿದೆ. ನಮ್ಮ ರಾಜ್ಯದ ವಿರೋದ ಪಕ್ಷದ ನಾಯಕರು ಸುಮ್ಮನೆ ಟೀಕೆ ಮಾಡುವುದನ್ನ ಬಿಟ್ಟು ಪ್ರಧಾನಿಯವ್ರ ಮೇಲೆ ಒತ್ತಡ ಹಾಕಬೇಕಿದೆ ಎಂದು ಆಗ್ರಹ ಮಾಡಿದರು.

2022 ರಲ್ಲಿ ಅತಿವೃಷ್ಟಿಯಿಂದ ಬೆಳೆವಿಮೆ ಹಣ ಸಮಯಕ್ಕೆ ಬರದಿರುವ ಪರಿಣಾಮ ೨೦೨೩ರಲ್ಲಿ ಬೆಳೆವಿಮೆ ಕಟ್ಟಲು ರೈತರು ಹಿಂದೇಟು ಹಾಕಿದ್ದಾರೆ. ತುಮಕುರು ಜಿಲ್ಲಾಡಳಿತ ಜೊತೆ ಸಭೆ ಕರೆದು ಬೆಳೆವಿಮೆ ಅಧಿಕಾರಿಗಳಿಗೆ ತಾಕೀತು ಮಾಡ್ತೀನಿ. ಕುಡಿಯುವ ನೀರಿನ ನಿರ್ವಹಣೆ ಮತ್ತು ಮೇವಿನ ಪೂರೈಕೆಯ ಬಗ್ಗೆ ತುರ್ತುಕ್ರಮಕ್ಕೆ ಈಗಾಗಲೇ 15 ಕೋಟಿ ಅನುಧಾನ ಜಿಲ್ಲಾಡಳಿತಕ್ಕೆ ನೀಡಲಾಗಿದೆ. ಜಂಪೇನಹಳ್ಳಿ ಕೆರೆಯ ಒತ್ತುದಾರರಿಗೆ ನೊಟೀಸ್ ಜಾರಿಯಾಗಿದೆ. ತುಮಕೂರು ಜಿಲ್ಲೆಯ ಕೆರೆಗಳ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮಕ್ಕೆ ಡಿಸಿಗೆ ಸೂಚಿಸಲಾಗಿದೆ ಎಂದರು.

ರಾಜ್ಯ ಸರಕಾರ ತುಮಕೂರು ಜಿಲ್ಲೆಯ 10 ತಾಲೂಕನ್ನು ಬರಪೀಡಿತ ಎಂದು ಈಗಾಗಲೇ ಘೋಷಣೆ ಮಾಡಿವೆ. ಬರಗಾಲದ ತುರ್ತು ಕೆಲಸ ಮತ್ತು ನಿರ್ವಹಣೆಯ ಬಗ್ಗೆ ತುಮಕೂರು ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ. 2023 ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದ ಜನತೆಯೇ ಬಿಜೆಪಿ ನಾಯಕರಿಗೆ ತಕ್ಕ ಉತ್ತರ ನೀಡಿದ್ದಾರೆ ಅಲ್ಲವೇ. ಕಿಯೋನಿಕ್ಸ್ ವಿಚಾರ ಸೇರಿದಂತೆ ಎಲ್ಲಾ ತನಿಖೆಯನ್ನ ನಮ್ಮ ಸರಕಾರ ಮಾಡಿಸುತ್ತದೆ ಎಂದು ಹೇಳಿದರು.

ಜನಪರ ಆಡಳಿತ ನೀಡುವುದೇ ನಮ್ಮ ಸರಕಾರದ ಮುಖ್ಯ ಉದ್ದೇಶ. 5 ಗ್ಯಾರಂಟಿ ಜನಪರ ಕಾರ್ಯಕ್ರಮ ಅನುಷ್ಟಾನ ಆಗುತ್ತೀವೆ. ನಮ್ಮ ಜನರಿಂದ ಸರಕಾರಕ್ಕೆ ಯಾವುದೇ ದೂರು ಬಂದಿಲ್ಲ. ವಿರೋಧ ಪಕ್ಷದ ನಾಯಕರಿಂದ ಮಾತ್ರ ಟೀಕೆಗಳು ಬರ್ತಿವೆ ಅಷ್ಟೆ. ನಾವು ಜನರ ಪರವಾಗಿ ಇದ್ದೇವೆ ಜನರಿಗಾಗಿ ಕೆಲಸ ಮಾಡ್ತೇವೆ. ಪ್ರಣಾಳಿಕೆಯಲ್ಲಿ ನಾವು ಜನರಿಗೆ ನೀಡಿದ ೫೦೦ಭರವಸೆಯಲ್ಲಿ ಈಗಾಗಲೇ 100 ಕ್ಕೂ ಅಧಿಕ ಅನುಷ್ಠಾನ ಆಗಿವೆ. 5 ವರ್ಷದೊಳಗೆ 500 ಭರವಸೆ ಈಡೇರಿಕೆ ಮಾಡುತ್ತೇವೆ ಎಂದರು.

ಸಭೆಯಲ್ಲಿ ತುಮಕೂರು ಜಿಲ್ಲಾಧೀಕಾರಿ ಶ್ರೀನಿವಾಸ್, ಜಿಪಂ ಸಿಇಓ ಪ್ರಭು, ಪೊಲೀಸ್ ವರೀಷ್ಟಾಧಿಕಾರಿ ಅಶೋಕ್, ಕೊರಟಗೆರೆ ತಹಶೀಲ್ದಾರ್ ಮಂಜುನಾಥ, ತಾಪಂ ಇಓ ದೊಡ್ಡಸಿದ್ದಯ್ಯ, ಪಪಂ ಮುಖ್ಯಾಧಿಕಾರಿ ಭಾಗ್ಯಮ್ಮ, ಕೃಷಿ ಇಲಾಖೆಯ ನಾಗರಾಜು, ಜಿಪಂ ಎಇಇ ರವಿಕುಮಾರ್, ತೋಟಗಾರಿಕೆ ನಾಗರಾಜು, ಅರಣ್ಯ ಇಲಾಖೆಯ ರವಿಕುಮಾರ್, ಸಾಮಾಜಿಕ ವಲಯ ಶಿಲ್ಪಾ, ಸಿಡಿಪಿಓ ಅಂಬಿಕಾ, ಸಿಪಿಐ ಅನಿಲ್, ಪಿಎಸೈ ಚೇತನ್ ಸೇರಿದಂತೆ ಇತರರು ಇದ್ದರು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago