ಇಸ್ಲಾಮಾಬಾದ್: ಲಷ್ಕರ್-ಎ-ತೊಯ್ಬಾ ಮಾಜಿ ಕಮಾಂಡರ್ ಅಕ್ರಮ್ ಖಾನ್ ಅವರನ್ನು ಪಾಕಿಸ್ತಾನದಲ್ಲಿ ಗುರುವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ವಿವರಗಳ ಪ್ರಕಾರ, ಅಕ್ರಮ್ ಗಾಜಿ ಎಂಬ ಹೆಸರಿನಿಂದಲೂ ಕರೆಯಲ್ಪಡುವ ಅಕ್ರಮ್ ಖಾನ್, ಬಜೌರ್ ಜಿಲ್ಲೆಯಲ್ಲಿ ಅಪರಿಚಿತ ದಾಳಿಕೋರರಿಂದ ಗುಂಡಿಕ್ಕಿ ಕೊಲ್ಲಲ್ಪಟ್ಟಿದ್ದಾನೆ ಎಂದು ಹೇಳಲಾಗಿದೆ.
2018 ರಿಂದ 2020 ರವರೆಗೆ ಎಲ್ಇಟಿ ನೇಮಕಾತಿ ಸೆಲ್ ಅನ್ನು ಮುನ್ನಡೆಸಿದ್ದ ಖಾನ್, ಪಾಕಿಸ್ತಾನದಲ್ಲಿ ಭಾರತ ವಿರೋಧಿ ಭಾಷಣಗಳಿಗೆ ಹೆಸರುವಾಸಿಯಾಗಿದ್ದ. ಅಲ್ಲದೆ ಭಯೋತ್ಪಾದಕ ಗುಂಪಿನ ಪ್ರಸಿದ್ಧ ವ್ಯಕ್ತಿಯಾಗಿದ್ದು, ದೀರ್ಘಕಾಲದವರೆಗೆ ಉಗ್ರಗಾಮಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಎನ್ನಲಾಗಿದೆ.
ಖಾನ್ ಎಲ್ಇಟಿ ನೇಮಕಾತಿ ಸೆಲ್ಗೆ ನೇತೃತ್ವ ವಹಿಸಿದ್ದರು, ಈ ವೇಳೆ ಉಗ್ರ ಸಂಘಟನೆಗೆ ಬೇಕಾದ ಯುವಕರನ್ನು ಉದ್ಯೋಗದ ಹೆಸರಲ್ಲಿ ನೇಮಕ ಮಾಡಿಕೊಂಡು ಅವರಿಗೆ ಭಯೋತ್ಪಾದನೆ ಬಗ್ಗೆ ತರಬೇತಿ ಕೊಡುತ್ತಿದ್ದ ಎನ್ನಲಾಗಿದೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…