ಕರಾವಳಿ

ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಹಂತಕ ಅರೆಸ್ಟ್

ಉಡುಪಿ : ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿದ ಕಟುಕನನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮಹಾರಾಷ್ಟ್ರ ಮೂಲದ ಪ್ರವೀಣ್ ಅರುಣ್ ಚೌಗಲೆ ಎಂದು ಗುರುತಿಸಲಾಗಿದೆ.

Advertisement
Advertisement
Advertisement

ಉಡುಪಿಯ ಮನೆಯೊಂದಕ್ಕೆ ನುಗ್ಗಿ ಒಂದೇ ಕುಟುಂಬದ ನಾಲ್ವರನ್ನು ಕೇವಲ 10 ನಿಮಿಷದಲ್ಲಿ ಕೊಲೆ ಮಾಡಿ ಪರಾರಿ ಆಗಿದ್ದನು. ಈತ ಕಳೆದ ಎರಡು ದಿನಗಳಿಂದ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದನು. ಇಂದು ಮಧ್ಯಾಹ್ನ ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರ ಇಲ್ಲವೇ ಆಂಧ್ರಕ್ಕೆ ತೆರಳಲು ಹಂತಕ ಪ್ಲ್ಯಾನ್ ಮಾಡಿಕೊಂಡಿದ್ದನು. ಪೊಲೀಸರು ಆತನ ಟೆಕ್ನಿಕಲ್ ಎವಿಡೆನ್ಸ್ ಆಧರಿಸಿ ಖೆಡ್ಡಾಕ್ಕೆ ಕೆಡವಿದ್ದಾರೆ. ಕೊಲೆ ಮಾಡಿ ಊರೂರು ಸುತ್ತುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

ಕುಡಚಿಯಲ್ಲಿರುವ ಸಂಬಂಧಿಯೊಬ್ಬರ ಮನೆಯಲ್ಲಿ ಆರೋಪಿ ಅವಿತುಕೊಂಡಿದ್ದು, ಮೊಬೈಲ್​​ ಟವರ್​ ಲೊಕೇಶನ್​​​ ಆಧರಿಸಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ನವೆಂಬರ್ 12 ಭಾನುವಾರದಂದು ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ತಾಯಿ ಹಸೀನಾ(46), ಪುತ್ರಿಯರಾದ ಅಫ್ನಾನ್ (23), ಅಯ್ನಾಝ್ (21) ಮತ್ತು ಪುತ್ರ ಆಸೀಮ್ (12) ನನ್ನು ಹತ್ಯೆ ಮಾಡಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿದಂತೆ ತನಿಖೆ ಕೈಗೊಂಡ ಪೊಲೀಸರು, ಆರೋಪಿಯ ಪತ್ತೆಗಾಗಿ ಬರೋಬ್ಬರಿ 5 ತಂಡಗಳನ್ನು ರಚನೆ ಮಾಡಿದ್ದರು. ಅದರಂತೆ ಇದೀಗ ಕುಡಚಿಯಲ್ಲಿ ಹಂತಕ ಸಿಕ್ಕಿಬಿದ್ದಿದ್ದು, ಪೊಲೀಸರು ಆತನನ್ನು ಉಡುಪಿಗೆ ಕರೆದೊಯ್ದಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago