ಕ್ರೀಡಾ ಸುದ್ದಿ

ನ್ಯೂಜಿಲ್ಯಾಂಡ್ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಭಾರತ

ಮುಂಬಯಿ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಸೆಮಿಫೈನಲ್ ಮೊದಲ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ದ ಅದ್ಭುತ ಹೋರಾಟ ಸಂಘಟಿಸಿ ಜಯ ಸಾಧಿಸಿದ ಭಾರತ ತಂಡ ಫೈನಲ್ ಗೆ ಲಗ್ಗೆ ಇಟ್ಟಿದೆ.

Advertisement
Advertisement
Advertisement

ಭಾರತ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ನೀಡಿದ 398 ರನ್ ಗುರಿ ಬೆನ್ನಟ್ಟಿದ ಕಿವೀಸ್ ಗೆ ವೇಗಿ ಮೊಹಮ್ಮದ್ ಶಮಿ ಆರಂಭಿಕ ಆಘಾತ ನೀಡುವಲ್ಲಿ ಯಶಸ್ವಿಯಾದರು. ಮೊದಲ ಎಸೆತದಲ್ಲೇ ಡೆವೊನ್ ಕಾನ್ವೆ (13 ರನ್) ಅವರನ್ನು ವಿಕೆಟ್ ಕೀಪರ್ ರಾಹುಲ್ ಕೈಗೆ ಕ್ಯಾಚಿತ್ತು ನಿರ್ಗಮಿಸುವಂತೆ ಮಾಡಿದರು. ರಚಿನ್ ರವೀಂದ್ರ (13 ರನ್) ಅವರನ್ನು ಮುಂದಿನ ಓವರ್ ನಲ್ಲಿ ಅದೇ ರೀತಿ ರಾಹುಲ್ ಕೈಗೆ ಕ್ಯಾಚಿತ್ತು ಪೆವಿಲಿಯನ್ ಗೆ ಮರಳುವಂತೆ ಮಾಡಿದರು . ಆರಂಭಿಕ ಆಘಾತಕ್ಕೆ ಸಿಲುಕಿದ ಬಳಿಕ ಕೇನ್ ವಿಲಿಯಮ್ಸನ್ (69 ರನ್) ಮತ್ತು ಡೆರಿಲ್ ಮಿಚೆಲ್ ಅಮೋಘ ಜತೆಯಾಟವಾಡಿ ಭಾರತದ ಬೌಲರ್ ಗಳನ್ನು ಕಾಡಿದರು. ಮಿಚೆಲ್ ಅಮೋಘ ಶತಕ ಸಿಡಿಸಿ ಪಂದ್ಯದ ತಿರುವಿನ ಸೂಚನೆ ನೀಡುವಂತೆ ಕಂಡು ಬಂದರು. 119 ಎಸೆತಗಳಲ್ಲಿ 134 ರನ್ ಗಳಿಸಿ ಔಟಾದರು. ಗ್ಲೆನ್ ಫಿಲಿಪ್ಸ್ 41 ರನ್ ಗಳಿಸಿ ಔಟಾದರು.ನಡೆಸಿ ಮಾರ್ಕ್ ಚಾಪ್ಮನ್ 2, ಮಿಚೆಲ್ ಸ್ಯಾಂಟ್ನರ್ 9, ಟ್ರೆಂಟ್ ಬೌಲ್ಟ್ 2, ಲಾಕಿ ಫರ್ಗುಸನ್ 6 ರನ್ ಗಳಿಸಿದರು.

ಭಾರತದ ಬೌಲರ್ ಗಳು ಸ್ವಲ್ಪ ದುಬಾರಿಯಾದರೂ ಶಮಿ ಬಿಗಿ ದಾಳಿ ನಡೆಸಿ 7 ವಿಕೆಟ್ ಕಬಳಿಸಿ ಹೊಸ ದಾಖಲೆ ಬರೆದರು. 9.5 ಓವರ್ ಗಳಲ್ಲಿ 57 ರನ್ ಮಾತ್ರ ಬಿಟ್ಟು ಕೊಟ್ಟರು.

ನ್ಯೂಜಿಲ್ಯಾಂಡ್ 48.5 ಓವರ್ ಗಳಲ್ಲಿ 327 ರನ್ ಗಳನ್ನು ಗಳಿಸಿ ಆಲೌಟಾಯಿತು.ಭಾರತ 70 ರನ್ ಗಳ ಅಮೋಘ ಜಯ ತನ್ನದಾಗಿಸಿಕೊಂಡಿತು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago