ಪುತ್ತೂರು :ಹಾವು ಕಡಿತಕ್ಕೊಳಗಾಗಿ ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಶಾಸಕ ಸಂಜೀವ ಮಠಂದೂರು ಅವರನ್ನು ನ.17ರಂದು ಬೆಳಿಗ್ಗೆ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.
ನ.16ರಂದು ರಾತ್ರಿ ಸುಮಾರು 7 ಗಂಟೆಗೆ ಮಠಂದೂರು ಅವರು ಮನೆಯ ಅಂಗಳದಲ್ಲಿ ವಾಕಿಂಗ್ ಹೋಗುತ್ತಿದ್ದ ವೇಳೆ ಕಡಂಬಳ ಹಾವು ಅವರ ಬಲ ಪಾದದ ಬದಿಗೆ ಕಡಿದಿದೆ. ತಕ್ಷಣ ಅವರು ವೈದ್ಯರಿಗೆ ಸಂಪರ್ಕಿಸಿದಾಗ, ವೈದ್ಯರ ಸಲಹೆ ಮೇರೆಗೆ ಅವರು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಮಠಂದೂರು ಅವರಿಗೆ ಡಾ. ಸುರೇಶ್ ಪುತ್ತುರಾಯ ಅವರು ಚಿಕಿತ್ಸೆ ನೀಡಿದ್ದಾರೆ. ಆರಂಭದಲ್ಲಿ ಅವರನ್ನು ಐಸಿಯು ವಿಗೆ ದಾಖಲಿಸಿದ್ದು, ಇಂದು ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ.
ರಕ್ತ ಪರೀಕ್ಷೆ ವರದಿಯಲ್ಲಿ ಯಾವುದೇ ವಿಷದ ಅಂಶ ಕಂಡುಬಂದಿಲ್ಲ. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಕಾರಣ ನ.17ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದೇನೆ ಎಂದು ಸಂಜೀವ ಮಠಂದೂರು ತಿಳಿಸಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…