ರಾಜ್ಯ

ಅಕ್ರಮ ವಿದ್ಯುತ್ ಸಂಪರ್ಕ: ಬೆಸ್ಕಾಂಗೆ ದಂಡ ಪಾವತಿಸಿದ ಹೆಚ್​​ಡಿ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರ ಮನೆಗೆ ದೀಪಾವಳಿ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್ ಬಳಕೆ ಕಲ್ಪಿಸಿದ ಪ್ರಕರಣ ಸಂಬಂಧ ಬೆಸ್ಕಾಂ ವಿಧಿಸಿದ 68,526 ರೂ. ದಂಡ ವಿಧಿಸಿದ್ದು ಅದನ್ನು ಅವರು ಪಾವತಿಸಿದ್ದಾರೆ.

Advertisement
Advertisement
Advertisement

ವಿದ್ಯುತ್ ಕಳ್ಳತನ ಕಾನೂನುಬಾಹಿರ ಕ್ರಿಯೆಯಾಗಿದೆ. 2003 ರ ವಿದ್ಯುತ್ ಕಾಯ್ದೆಯ ಸೆಕ್ಷನ್ 135 , ಸೆಕ್ಷನ್ 150 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ವಿದ್ಯುತ್ ತಂತಿಗಳನ್ನು ಸ್ವಾಧೀನಪಡಿಸಿಕೊಂಡರೆ, ಅಥವಾ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ವಿದ್ಯುತ್ ತಂತಿಯನ್ನು ತೆಗೆದುಕೊಂಡು ಹೋದರೆ ಇಲಾಖೆಯ ಒಪ್ಪಿಗೆಯಿಲ್ಲದೆ ವಿದ್ಯುತ್ ತಂತಿಯನ್ನು ಬಳಸಿದರೆ ಶಿಕ್ಷೆಗೆ ಅವಕಾಶ ಇದೆ. ಮೂರು ವರ್ಷಗಳ ಜೈಲು ಶಿಕ್ಷೆ ಅಥವಾ ದಂಡಕ್ಕೆ ಕಾಯಿದೆ ಪ್ರಕಾರ ಅವಕಾಶ ಇದೆ.

ಅಕ್ರಮ ವಿದ್ಯುತ್ ಬಳಕೆ ಸಂಬಂಧಪಟ್ಟಂತೆ, ಡಿವೈಎಸ್ಪಿ ಅನುಷಾ ಅವರ ಮಾರ್ಗದರ್ಶನದಲ್ಲಿ, ಬೆಸ್ಕಾಂ ವಿಜಿಲೆನ್ಸ್ ಸೆಲ್, ವಿದ್ಯುತ್ ಬಳಕೆಯ ನಿಖರವಾದ ಮೌಲ್ಯಮಾಪನವನ್ನು ನಡೆಸಿದ್ದು, ನಿರ್ದಿಷ್ಟವಾಗಿ ಕೇವಲ 10 ನಿಮಿಷಗಳ ಕಾಲಮಿತಿಯೊಳಗೆ ಬಳಸಲಾದ ವಿದ್ಯುತ್ ಪ್ರಮಾಣವನ್ನು ಕೇಂದ್ರೀಕರಿಸಿ ಎರಡು ದಿನಗಳ ಅವಧಿಯ ಬಳಕೆಯನ್ನು ಲೆಕ್ಕ ಹಾಕಿ, ನವೆಂಬರ್ 14 ರಂದು ಸಮಗ್ರ ವರದಿಯನ್ನು ಸಲ್ಲಿಸಲಾಯಿತು. ಪರಿಣಾಮವಾಗಿ, ಬೆಸ್ಕಾಂ ಇಲಾಖೆಯು ಈಗ 68,526 ರೂ.ಗಳ ಗಣನೀಯ ದಂಡವನ್ನು ವಿಧಿಸಿದೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago