ತಾಳೆ ಮರದಿಂದ ಬಿದ್ದು ವ್ಯಕ್ತಿ ಸಾವು

0
113

ಕೊಳ್ತಿಗೆ : ಕೊಳ್ತಿಗೆ ಗ್ರಾಮದ ಪಾಂಬಾರು ನಿವಾಸಿ ಜಯಂತ ಪೂಜಾರಿ ಎಂಬವರು ತಾಳೆ ಮರದಿಂದ ಬಿದ್ದು ಮೃತಪಟ್ಟಿದ್ದಾರೆ.

ತಾಳೆ ಮರಕ್ಕೆ ಏರಿ ಮೂರ್ತೆ ಮಾಡುವ ಸಂದರ್ಭದಲ್ಲಿ ಆಯ ತಪ್ಪಿ ಕೆಳಕ್ಕೆ ಬಿದ್ದ ಜಯಂತ ಪೂಜಾರಿ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತದರೂ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.

ಮೃತ ಜಯಂತ ಪೂಜಾರಿ ಅವರು ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here