ವಿಷ ಕುಡಿದಿದ್ದ ವ್ಯಕ್ತಿಯನ್ನು ತಮ್ಮ ಕಾರಿನಲ್ಲಿಯೇ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಶಾಸಕ

By: Ommnews

Date:

Share post:

ದಾವಣಗೆರೆ: ವಿಷ ಕುಡಿದಿದ್ದ ವ್ಯಕ್ತಿಯನ್ನು ಮಾಯಕೊಂಡ ಶಾಸಕ ಬಸವಂತಪ್ಪ ತಮ್ಮ ಕಾರಿನಲ್ಲಿಯೇ ಆಸ್ಪತ್ರೆಗೆ ಸಾಗಿಸಿ ಜೀವ ಉಳಿಸಿದ್ದಾರೆ.

Advertisement
Advertisement
Advertisement

ದಾವಣಗೆರೆ ತಾಲೂಕು ಅಣಬೇರು ಗ್ರಾಮದಲ್ಲಿ ಘಟನೆ ನಡೆದಿದ್ದು, ರೇವಣಸಿದ್ದಪ್ಪ (45) ಎಂಬ ವ್ಯಕ್ತಿ ಕುಡಿದ ಮತ್ತಿನಲ್ಲಿ ವಿಷ ಸೇವಿಸಿದ್ದ. ಆತನನ್ನು ಚಿಕಿತ್ಸೆಗೆ ಕರೆದೊಯ್ಯಲು ಅಂಬುಲೆನ್ಸ್‌ಗೆ ಕರೆ ಮಾಡಲಾಗಿತ್ತು. ಆದರೆ 1 ಗಂಟೆ ಕಾದರೂ ಅಂಬುಲೆನ್ಸ್ ಬಾರದ ಹಿನ್ನೆಲೆ ಪಕ್ಕದ ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕ ಬಸವಂತಪ್ಪ ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದ್ದಾರೆ.

ವಿಷ ಕುಡಿದು 1 ಗಂಟೆಯಿಂದ ನರಳಾಡುತ್ತಿದ್ದ ವ್ಯಕ್ತಿಯ ಸ್ಥಿತಿ ಗಂಭೀರ ಆಗಿದ್ದರಿಂದ ವಿಷಯ ತಿಳಿಯುತ್ತಿದ್ದಂತೆ ತಕ್ಷಣ ತಮ್ಮ ಕಾರಿನಲ್ಲಿ ಆತನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ದಾವಣಗೆರೆಯ ಸಿಜೆ ಆಸ್ಪತ್ರೆಗೆ ವ್ಯಕ್ತಿಯನ್ನು ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಶಾಸಕರ ಸಮಯಪ್ರಜ್ಞೆಯಿಂದ ಜೀವವೊಂದು ಉಳಿದಿದೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section