ಪುತ್ತೂರು

ಬಿಜೆಪಿ ಸರಕಾರವೇ ಗಡಿಪಾರು ಆಗಲಿರುವ ಯುವಕರ ಮೇಲೆ ಕೇಸು ಹಾಕಿ ಈಗ ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ : ಅಶೋಕ್ ರೈ

ಪುತ್ತೂರು: ಕೋಮು ಗಲಭೆ, ದನಸಾಗಾಟ ಹಲ್ಲೆ, ನೈತಿಕ ಪೊಲೀಸ್ ಗಿರಿ ಸೇರಿ ಕೆಲವು ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಸಂಬಂಧ ಪುತ್ತೂರಿನ ಕೆಲವು ಯುವಕರ ಮೇಲೆ ಗಡಿಪಾರು ನೋಟೀಸ್ ಜಾರಿಯಾಗಿದೆ. ಬಿಜೆಪಿ ಸರಕಾರವೇ ಈ ಯುವಕರ ಮೇಲೆ ಕೇಸು ಹಾಕಿ ಈಗ ಯುವಕರ ಪರ ಪ್ರತಿಭಟನೆಯ ನಾಟಕವಾಡುತ್ತಿದ್ದು ಜನ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

Advertisement
Advertisement
Advertisement

ಮಾಧ್ಯಮದ ಜೊತೆ ಮಾತನಾಡಿದ ಅವರು ಈ ವಿಚಾರದಲ್ಲಿ ಬಿಜೆಪಿ ನಾಯಕರು ಆತ್ಮ ವಿಮರ್ಶೆ ಮಾಡಿಕೊಳ್ಳುವುದು ಉತ್ತಮ. ಯುವಕರನ್ನು ಬಳಕೆ ಮಾಡಿ ಅವರ ಮೇಲೆ ಕೇಸು ಹಾಕಿಸಿ ಅವರನ್ನು ಗಡಿಪಾರುಮಾಡುವಂತೆ ಮಾಡಿ ಆ ಬಳಿಕ ಅವರ ಪರ ಪ್ರತಿಭಟನೆಯ ನಾಟಕವಾಡುವುದು ಇವರ ಕೆಲಸವಾಗಿದೆ. ಇವರ ಸರಕಾರ ಇರುವಾಗಲೇ ಯುವಕರ ಮೇಲೆ ಕೇಸು ಹಾಕಿಸಿದ್ದಾರೆ ಬಿಜೆಪಿಯವರೇ ಕೇಸ್ ಹಿಂಪಡೆಸಬೇಕಿತ್ತು. ಇವರ ಲಾಭಕ್ಕಾಗಿ ಯುವಕರ ಮೇಲೆ ಕೇಸು ಹಾಕಿಸಿದ್ದಾರಲ್ಲ ಯುವಕರು ಆಲೋಚನೆ ಮಾಡಬೇಕು.

ಈಗ ಕಾಂಗ್ರೆಸ್ ಸರಕಾರದವರು ಗಡಿಪಾರು ಮಾಡಿದ್ದಾರೆ ಎಂದು ಬಿಜೆಪಿಯವರು ಪ್ರತಿಭಟನೆ ಮಾಡಲು ಮುಂದಾಗಿರುವುದು ಹೇಸಿಗೆಯ ವಿಚಾರವಾಗಿದೆ. ಯುವಕರನ್ನು ಅವರ ಲಾಭಕ್ಕಾಗಿ ಬಳಕೆ ಮಾಡಿ ಅವರಿಗೆ ದಿಕ್ಕು ದೆಸೆಯಿಲ್ಲದೆ ಮಾಡಿದ್ದಾರೆ. ಗಡಿಪಾರಾದ ಯುವಕರು ಕೃತ್ಯದಲ್ಲಿ ಭಾಗಿಯಾಗಿದ್ದಾರಾ ಎಂಬುದನ್ನು ಇಲಾಖೆ ಕೂಲಂಕುಶವಾಗಿ ತನಿಖೆ ಮಾಡುತ್ತದೆ ಈ ಬಗ್ಗೆ ನಾನು ಇಲಾಖೆಗೆ ಸೂಚನೆಯನ್ನು ನೀಡಿದ್ದೇನೆ. ಬಿಜೆಪಿಯವರು ನಾಟಕ ಮಾಡುವುದನ್ನು ಮೊದಲು ನಿಲ್ಲಿಸಬೇಕು ಮತ್ತು ಯುವಕರನ್ನು ಕೆಟ್ಟ ಕೆಲಸಗಳಿಗೆ ಬಳಕೆ ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago