ಹಾವೇರಿ: ಅಪಘಾತದಲ್ಲಿ ಮೃತಪಟ್ಟ ಮಗನ ಹೆಸರಿನಲ್ಲಿ ತಾಯಿಯೊಬ್ಬಳು ಗೋಶಾಲೆ ನಿರ್ಮಿಸಿ ಅವನ ಜನ್ಮದಿನದಂದೇ ಲೋಕಾರ್ಪಣೆ ಮಾಡಿ ಸುದ್ದಿಯಾಗಿದ್ದಾರೆ.
ಸಂಗೀತಾ ಎಂಬವರ ಒಬ್ಬನೇ ಪುತ್ರ ಸಂದೇಶ ಎಂಬಾತ ಹುಬ್ಬಳ್ಳಿಯಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ. ನಾಲ್ಕು ತಿಂಗಳ ಹಿಂದೆ ಬೆಳಗಾವಿಗೆ ಹೋಗಿದ್ದಾಗ ಆತ ಅಪಘಾತದಲ್ಲಿ ಮೃತಪಟ್ಟಿದ್ದ. ಇದರಿಂದ ಕಂಗೆಟ್ಟಿದ್ದ ತಾಯಿ ನಿರಂತರ ದುಃಖದಲ್ಲಿ ಕಾಲ ಕಳೆಯುತ್ತಿದ್ದಳು. ಇದೀಗ ಗಾಂಧಿಪುರ ಗ್ರಾಮದಲ್ಲಿ ಒಂದು ಎಕರೆ ಜಾಗ ಖರೀದಿ ಮಾಡಿ ಮಗನ ಹೆಸರಿನಲ್ಲಿ ಗೋಶಾಲೆ ನಿರ್ಮಿಸಿದ್ದಾರೆ.
ಗೋಶಾಲೆಗೆ ಸುಮಾರು 50 ಲಕ್ಷ ರೂ. ಖರ್ಚಾಗಿದೆ. ರೈತರ ಜಾನುವಾರುಗಳು, ಬೀಡಾಡಿ ಜಾನುವಾರುಗಳು, ಬಂಜೆತನ ಹೊಂದಿರುವ ಹಸುಗಳನ್ನು ಸಾಕಲು ಮೇವಿನ ಕೊರತೆ ಎದುರಿಸುತ್ತಿರುವವರಿಗಾಗಿ ಈ ಗೋಶಾಲೆ ನಿರ್ಮಿಸಿದ್ದಾಗಿ ಸಂಗೀತಾ ಹೇಳಿಕೊಂಡಿದ್ದಾರೆ. ಹುಕ್ಕೇರಿ ಮಠದ ಸದಾಶಿವ ಶ್ರೀಗಳು ಈ ಗೋಶಾಲೆಯನ್ನು ಉದ್ಘಾಟನೆ ಮಾಡಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…