ಕರಾವಳಿ

ಬೆಂಗಳೂರು ಕಂಬಳ : ಕರಾವಳಿಯಿಂದ ಬೆಂಗಳೂರಿಗೆ ಕೋಣಗಳ ಪ್ರಯಾಣದ ಕುರಿತು ವಿವರ

ಬೆಂಗಳೂರು : ನ.25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳ ಸ್ಪರ್ಧೆ ನಡೆಯಲಿದೆ.ಪುತ್ತೂರು ಶಾಸಕ ಅಶೋಕ್ ರೈಗಳ ಸಾರಥ್ಯದಲ್ಲಿ ಬೆಂಗಳೂರು ಕಂಬಳಕ್ಕೆ ಸಕಲ ಸಿದ್ದತೆ ನಡೆಯುತ್ತಿದೆ. 2023-24ರ ಕಂಬಳ ಸೀಸನ್ ಈಗಾಗಲೇ ಆರಂಭವಾಗಿದ್ದು, ಬಂಟ್ವಾಳ ತಾಲೂಕಿನ ಕಕ್ಯಪದವು ಎಂಬಲ್ಲಿ ಮೊದಲ ಕಂಬಳ ನಡೆದಿದೆ. 189 ಜೋಡಿ ಕೋಣಗಳು ಈ ಕೂಟದಲ್ಲಿ ಭಾಗವಹಿಸಿದ್ದವು. ಇದೀಗ ಈ ಕೋಣಗಳು ಬೆಂಗಳೂರು ಲಾರಿ ಏರಲು ಸಿದ್ದವಾಗಿವೆ.

Advertisement
Advertisement
Advertisement

ಗುರುವಾರ (ನ.23) ಎಲ್ಲಾ ಓಟದ ಕೋಣಗಳೊಂದಿಗೆ ಯಜಮಾನರುಗಳು ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಗುರುವಾರ ಬೆಳಗ್ಗೆ 9 ಗಂಟೆಯ ಸುಮಾರಿಗೆ ಉಪ್ಪಿನಂಗಡಿಯ ಕಾಲೇಜು ಮೈದಾನದಲ್ಲಿ ಸೇರಲಿದ್ದಾರೆ. ಅಲ್ಲಿ ಗಣಹೋಮ ನಡೆದು, ಬಳಿಕ ಉಪಹಾರ ಸೇವಿಸಿ 10.30ಕ್ಕೆ ಸರಿಯಾಗಿ ಬೆಂಗಳೂರು ಕಡೆ ಪ್ರಯಾಣ ಆರಂಭಿಸಲಿದ್ದಾರೆ. ಇದಕ್ಕಾಗಿ ಶಾಸಕರ ನೇತೃತ್ವದಲ್ಲಿ ತಯಾರಿ ನಡೆಯುತ್ತಿದ್ದು, ಸ್ಥಳೀಯ ಸಾಮಾಜಿಕ ಮುಂದಾಳುಗಳು ಸಾಥ್ ನೀಡಲಿದ್ದಾರೆ.

ಓಟದ ಕೋಣಗಳಿಗೆ ಅನುಕೂಲವಾಗುವಂತೆ ಕರಾವಳಿಯಿಂದಲೇ ನೀರು, ಬೈಹುಲ್ಲು, ಹುರುಳಿಯನ್ನು ಬೆಂಗಳೂರಿಗೆ ಕೊಂಡೊಯ್ಯಲಾಗುತ್ತದೆ. ನೂರಕ್ಕೂ ಹೆಚ್ಚು ಲಾರಿಗಳು ಸಾಲಾಗಿ ಕರಾವಳಿಯ ಸಾಂಸ್ಕೃತಿಕ ಮೆರುಗನ್ನು ಹೊತ್ತು ರಾಜಧಾನಿಯತ್ತ ಸಾಗಲಿವೆ.

ಗುರುವಾರ ಮಧ್ಯಾಹ್ನ 2 ಗಂಟೆಯಿಂದ ಐದು ಗಂಟೆಯ ತನಕ ವಿರಾಮ ನೀಡಲಾಗಿದೆ. ಅಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ನೇತೃತ್ವದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನದ ಊಟೋಪಚಾರವೂ ಇಲ್ಲೇ ನಡೆಯಲಿದೆ. ಈ ವೇಳೆ ಕೋಣಗಳನ್ನು ಲಾರಿಯಿಂದ ಇಳಿಸಿ ವಿಶ್ರಾಂತಿ ನೀಡಲಾಗುವುದು.

ಸಂಜೆ ಐದು ಗಂಟೆಯಿಂದ ಹಾಸನದಿಂದ ಹೊರಟ ಕೋಣಗಳಿಗೆ ಚನ್ನರಾಯಪಟ್ಟಣದಲ್ಲಿ ಸ್ವಾಗತ ನೀಡಲಾಗುವುದು. ಬಳಿಕ ನೆಲಮಂಗಲ ಬೆಂಗಳೂರು ಪ್ರವೇಶಿಸಿ ಸುಮಾರು 11 ಗಂಟೆಗೆ ಅರಮನೆ ಮೈದಾನಕ್ಕೆ ಆಗಮಿಸಲಿದೆ.

ಈಗಾಗಲೇ 179 ಜೋಡಿ ಕೋಣಗಳ ಯಜಮಾನರು ಬೆಂಗಳೂರು ಕಂಬಳಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಕಕ್ಯಪದವು ಕಂಬಳದಲ್ಲಿ ಅವುಗಳ ಓಟವನ್ನು ಪರಿಶೀಲಿಸಿ ಪರಿಷ್ಕರಣೆ ಮಾಡಲಾಗುತ್ತಿದೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago