ಕರಾವಳಿ

ಅಧಿಕಾರಕ್ಕೆ ಬಂದ ಆರೇ ತಿಂಗಳಿಗೆ ಜನಪ್ರಿಯತೆ ಕಳೆದುಕೊಂಡ ಕಾಂಗ್ರೆಸ್: ವಿಜಯೇಂದ್ರ ವ್ಯಂಗ್ಯ

ಮಂಗಳೂರು: ಅಧಿಕಾರಕ್ಕೆ ಬಂದು ಆರೇ ತಿಂಗಳಿಗೆ ಜನಪ್ರಿಯತೆಯನ್ನು ಕಳೆದುಕೊಂಡ ಸರ್ಕಾರ ಎಂದರೆ ಅದು ಕಾಂಗ್ರೆಸ್ ಮಾತ್ರ ಎಂದು ಬಿಜೆಪಿ ನೂತನ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.

Advertisement
Advertisement
Advertisement

ಬಿಜೆಪಿಯ ನೂತನ ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ಬಿ.ವೈ.ವಿಜಯೇಂದ್ರ ಅವರಿಗೆ ಸೇಬು ಹಣ್ಣಿನ ಹಾರ ಹಾಕುವ ಮೂಲಕ ಭರ್ಜರಿ ಸ್ವಾಗತ ಮಾಡಲಾಯಿತು.

ಈ ವೇಳೆ ಮಾತನಾಡಿದ ಅವರು ಪಕ್ಷಾತೀತರಾದ ವಿಧಾನ ಸಭಾಧ್ಯಕ್ಷರಲ್ಲಿ ಜಾತಿ ಧರ್ಮ ಕಾಣುವ ಧೊರಣೆ ಕಂಡ ಜಮೀರ್ ಅಹ್ಮದ್ ಅವರು ರಾಜೀನಾಮೆ ನೀಡಲೇಬೇಕು ಇಲ್ಲವಾದರೆ ಮುಂದಿನ ಅಧಿವೇಶನದಲ್ಲಿ ಅವರು ಹೇಗೆ ಪಾಲ್ಗೊಳ್ಳುತ್ತಾರೋ ನೋಡುತ್ತೇವೆ ಎಂದು ಸವಾಲೊಡ್ಡಿದರು.

ಬರದಲ್ಲಿ ಕಂಗೆಟ್ಟ ರಾಜ್ಯದ ರೈತರಿಗೆ ಸಾಂತ್ವನ ಕ್ರಮವನ್ನು ಆದ್ಯತೆ ಮೇರೆಗೆ ಸರಕಾರ ಕೈಗೊಳ್ಳುವ ಬದಲಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಬಗ್ಗೆ ಕಾಂಗ್ರೆಸ್ ಚರ್ಚೆ ಮಾಡಿದೆ, ನಿಗಮ‌ಮಂಡಳಿಗೆ ನೇಮಕ ಮಾಡುವ ಬಗ್ಗೆ ಚರ್ಚೆ ಮಾಡಿರುವುದು ರೈತರಿಗೆ ಮಾಡಿದ ಅವಮಾನ ಎಂದು ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದರು.

ಆಡಳಿತ ಪಕ್ಷದ ಶಾಸಕರಿಗೇ ತಮ್ಮ ಕ್ಷೇತ್ರದಲ್ಲಿ ಗೌರವಯುತವಾಗಿ ತಲೆ ಎತ್ತಿ ನಡೆಯುವ ಪರಿಸ್ಥಿತಿ ಇಲ್ಲ. ನಮ್ಮ ಸರಕಾರ ಇದ್ದಾಗ ಬೇಸಿಗೆಯಲ್ಲಿ ಕೂಡಾ ವಿದ್ಯುತ್ ಪೂರೈಕೆ ಸರಿಯಾಗಿ ಆಗುತ್ತಿತ್ತು. ಈಗ ವಿದ್ಯುತ್ ಪರಿಸ್ಥಿತಿ ಹದಗೆಟ್ಟಿದೆ. ಜನರು ನೀರಿಲ್ಲದೆ ಕಂಗೆಟ್ಟಿರುವಾಗ ಸಿಎಂ ಮನೆಗೆ ಕೋಟಿ ಕೋಟಿ ಖರ್ಚು ಮಾಡುತ್ತಾರೆ, ಸಚಿವರಿಗೆ ಹೊಸ ಕಾರು ಖರೀದಿಸುತ್ತಾರೆ. ಇದರೆಲ್ಲದರ ವಿರುದ್ಧ ಬಿಜೆಪಿ ಸದನದ ಒಳಗೆ ಹೊರಗೆ ಹೋರಾಡಲಿದೆ ಎಂದು ಎಚ್ಚರಿಕೆ ನೀಡಿದರು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

2 years ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

2 years ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

2 years ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

2 years ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

2 years ago