ಬೆಂಗಳೂರು :ನವೆಂಬರ್ 25,26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ನಮ್ಮ ಕಂಬಳ ಬೆಂಗಳೂರು ಕಂಬಳದ ಆಮಂತ್ರಣ ಪತ್ರಿಕೆಯನ್ನು ಪುತ್ತೂರು ಶಾಸಕ ಹಾಗೂ ಕಂಬಳ ಸಮಿತಿಯ ಅಧ್ಯಕ್ಷರೂ ಆಗಿರುವ ಅಶೋಕ್. ಕುಮಾರ್ ರೈ ಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಮಂತ್ರಣ ಪತ್ರ ನೀಡಿ ಅಹ್ವಾನ ನೀಡಿದರು.
ಸಿದ್ಧರಾಮಯ್ಯರವರು 25ರಂದು ಸಂಜೆ ನಡೆಯುವ ಮುಖ್ಯ ಸಭಾ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ.
ಬೆಂಗಳೂರುರಿನಲ್ಲಿ ನಡೆಯುತ್ತಿರುವ ಕಂಬಳದ ಬಗ್ಗೆ, ಕಂಬಳಕ್ಕೆ ಬರುವ ಅತಿಥಿಗಳು ಹಾಗೂ ಭಾಗವಹಿಸುವ ಲಕ್ಷಾಂತರ ಕಂಬಳಾಭಿಮಾನಿಗಳ ಕುರಿತು ಸಿಎಂ ಅವರಿಗೆ ಅಶೋಕ್ ರೈ ಯವರು ವಿವರಣೆ ನೀಡಿದರು.
ಕರ್ನಾಟಕದ ಇತಿಹಾಸದಲ್ಲೇ ರಾಜ್ಯದ ರಾಜಧಾನಿಯಲ್ಲಿ ತುಳುನಾಡಿನ ಜನಪದ ಕ್ರೀಡೆ ಕಂಬಳವನ್ನು ಆಯೋಜನೆ ಮಾಡಿದ್ದಕ್ಕಾಗಿ ಸಿಎಂ ಸಿದ್ದರಾಮಯ್ಯರವರು ಅಶೋಕ್ ರೈಯವರನ್ನು ಅಭಿನಂದಿಸಿದರು.
ನನಗೆ ಕಂಬಳವನ್ನು ವೀಕ್ಷಿಸಬೇಕು. ಕರಾವಳಿಯ ಕಂಬಳವನ್ನು ಬೆಂಗಳೂರಿನಲ್ಲಿ ಆಯೋಜನೆ ಮಾಡುವ ಮೂಲಕ ರಾಜಧಾನಿಯಲ್ಲಿರುವ ಎಲ್ಲಾ ಜನತೆಗೂ, ದೇಶ – ವಿದೇಶದವರಿಗೂ ಕಂಬಳವನ್ನು ನೋಡುವ ಯೋಗ ದೊರಕಿದೆ.
ಸರಕಾರದ ಪೂರ್ಣ ಪ್ರಮಾಣದ ಬೆಂಬಲವನ್ನು ಈ ಸಂದರ್ಭದಲ್ಲಿ ಸಿಎಂ ಘೋಷಿಸಿದರು.
ಕಂಬಳಕ್ಕೆ ಪೇಟಾದವರ ಆಕ್ಷೇಪ ಇದ್ದ ಸಂದರ್ಭದಲ್ಲಿ ಅಂದು ಸಿಎಂ ಆಗಿದ್ದ ನೀವು ನಮ್ಮ ಹೋರಾಟಕ್ಕೆ ಸಹಾಯ ಮಾಡಿದ್ದೀರಿ ಎಂದು ಸಿಎಂ ಬಳಿ ಅಶೋಕ್ ರೈ ನೆನಪಿಸಿದರು.
ಈ ಸಂದರ್ಭದಲ್ಲಿ. ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕಂಬಳ ಸಮಿತಿಯ ಕಾರ್ಯಾಧ್ಯಕ್ಷರಾದ ಗುರುಕಿರಣ್ ಮತ್ತು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು