ಅಂತರಾಷ್ಟ್ರೀಯ

ಅಮೆರಿಕದ ಒಹಿಯೋದಲ್ಲಿ ಗುಂಡಿನ ದಾಳಿಗೆ ಭಾರತೀಯ ವಿದ್ಯಾರ್ಥಿ ಮೃತ್ಯು

ವಾಷಿಂಗ್ಟನ್:‌ ಭಾರತೀಯ ಮೂಲದ ಡಾಕ್ಟರೇಟ್‌ ವಿದ್ಯಾರ್ಥಿ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿರುವ ಘಟನೆ ಅಮೆರಿಕದ ಒಹಿಯೋದಲ್ಲಿ ನಡೆದಿದ್ದು, ಇದೊಂದು ದುರಂತ, ಆಕಸ್ಮಿಕ, ಆಘಾತಕಾರಿ ಘಟನೆ ಎಂದು ಮೆಡಿಕಲ್‌ ಯೂನಿರ್ವಸಿಟಿ ಪ್ರಕಟನೆಯಲ್ಲಿ ತಿಳಿಸಿದೆ.

Advertisement
Advertisement
Advertisement

ಭಾರತದ ಆದಿತ್ಯ ಅದ್ಲಾಖಾ(26ವರ್ಷ) ಸಿನ್ಸಿನಾಟಿ ಮೆಡಿಕಲ್‌ ಸ್ಕೂಲ್‌ ನಲ್ಲಿ ನಾಲ್ಕನೇ ವರ್ಷದ ಡಾಕ್ಟರೇಟ್‌ ವಿದ್ಯಾರ್ಥಿಯಾಗಿದ್ದರು ಎಂದು ಡಬ್ಲ್ಯುಎಕ್ಸ್‌ ಐಎಕ್ಸ್‌ ಟಿವಿ ವರದಿ ಮಾಡಿದೆ.

ಗೋಡೆಗೆ ಡಿಕ್ಕಿ ಹೊಡೆದ ಕಾರಿನೊಳಗೆ ಆದಿತ್ಯ ಪತ್ತೆಯಾಗಿದ್ದ ಎಂದು ಸಿನ್ಸಿನಾಟಿ ಪೊಲೀಸ್‌ ಲೆಫ್ಟಿನೆಂಟ್‌ ಜೋನಾಥನ್‌ ಕನ್ನಿಂಗ್‌ ಹ್ಯಾಮ್‌ ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿರುವುದು ಕಂಡುಬಂದಿತ್ತು.

ಗುಂಡಿನ ದಾಳಿಗೆ ಒಳಗಾಗಿರುವ ಕಾರೊಂದು ಪತ್ತೆಯಾಗಿದ್ದು, ಅದರೊಳಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವುದಾಗಿ ವಾಹನದ ಚಾಲಕರೊಬ್ಬರು 9111ಗೆ ಕರೆ ಮಾಡಿ ಮಾಹಿತಿ ನೀಡಿರುವುದಾಗಿ ವರದಿ ವಿವರಿಸಿದೆ.

ಕೂಡಲೇ ಸ್ಥಳಕ್ಕಾಮಿಸಿದ್ದ ಪೊಲೀಸರು ಪರಿಶೀಲನೆ ನಡೆಸಿದಾಗ ಆದಿತ್ಯ ಉಸಿರಾಡುತ್ತಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಎರಡು ದಿನದ ಬಳಿಕ ಆದಿತ್ಯ ಕೊನೆಯುಸಿರೆಳೆದಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago