ರಾಜ್ಯ

ಬೆಂಗಳೂರು ಕಂಬಳ ಕಣ್ತುಂಬಿಕೊಂಡ ಜಪಾನ್​ ಪ್ರಜೆ

ಬೆಂಗಳೂರು: ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ‘ಬೆಂಗಳೂರು ಕಂಬಳ’ ಹಬ್ಬವನ್ನು ಆಯೋಜಿಸಲಾಗಿದ್ದು, ಎರಡು ದಿನಗಳ ಕಾಲ ಈ ಕಾರ್ಯಕ್ರಮ ನಡೆಯಲಿದೆ.

Advertisement
Advertisement
Advertisement

ರಾಜ್ಯದ ಜನತೆಯ ಮಧ್ಯೆ ಜಪಾನ್​ ಪ್ರಜೆಯೊಬ್ಬರು ಕಂಬಳ ನೋಡಲು ಬಂದಿದ್ದು, ತಮ್ಮ ಅನುಭವವನ್ನು ಸಂತಸದಿಂದ ಹಂಚಿಕೊಂಡಿದ್ದಾರೆ.

ವಿವಿಧ ಕಾರಣಕ್ಕೆ ಬೆಂಗಳೂರಿಗೆ ಭೇಟಿ ನೀಡುವ ವಿದೇಶಿಗರ ಸಂಖ್ಯೆ ಹೆಚ್ಚಿದೆ. ನಗರದ ವಿವಿಧ ಹೋಟೆಲ್​​ಗಳಲ್ಲಿ ತಂಗಿದ್ದ ವಿದೇಶಿ ಮಂದಿಗೆ, ಇಲ್ಲೇ ಹತ್ತಿರದಲ್ಲಿ ಕಂಬಳ ನಡೆಯುತ್ತಿದೆ ಎಂಬ ವಿಷಯ ಗೊತ್ತಾಗಿದೆ. ಹೀಗಾಗಿ ಕೋಣಗಳ ಓಟ ಹೇಗಿರುತ್ತದೆ ಎಂಬುದನ್ನು ಕಾಣಲು ಅರಮನೆ ಮೈದಾನಕ್ಕೆ ಆಗಮಿಸಿದ್ದರು.ವಿದೇಶಿಗರು ಕೋಣಗಳ ಓಟ ಕಂಡು ಪುಳಕಿತರಾದರು.

ನೆದರ್​ಲೆಂಡ್​, ಇಂಗ್ಲೆಂಡ್​, ಫ್ರಾನ್ಸ್, ಜರ್ಮನಿ, ಅಮೆರಿಕಾ ದೇಶದ ಮಂದಿ ಕಂಬಳವನ್ನು ಕಣ್ತುಂಬಿಕೊಂಡರು. ಜತೆಗೆ ಕೋಣಗಳ ಓಟವನ್ನು ಸೆರೆಹಿಡಿಯಲು ಕೆಲ ವಿದೇಶಿ ಫೋಟೋಗ್ರಾಫರ್​ಗಳು ತಮ್ಮ ಭಾರತೀಯ ಸ್ನೇಹಿತರೊಂದಿಗೆ ಆಗಮಿಸಿದ್ದರು.

ಬೆಂಗಳೂರು ಕಂಬಳವನ್ನು ಕಂಡು ಉತ್ಸಾಹದಿಂದ ಮಾತನಾಡಿದ ಜಪಾನ್​ ನಾಗರಿಕ ಜರು, ‘ಕಂಬಳವನ್ನು ನೋಡಲು ಕುತೂಹಲವಿತ್ತು. ಈ ಕ್ರೀಡೆಯನ್ನು ಮೊದಲ ಬಾರಿಗೆ ನೋಡುತ್ತಿದ್ದೇನೆ. ಇದರ ಬಗ್ಗೆ ನನ್ನ ಸ್ನೇಹಿತ ಮಾಹಿತಿ ನೀಡಿದ ತಕ್ಷಣ ಇಷ್ಟವಾಯಿತು’ ಎಂದರು.

‘ಕಂಬಳವನ್ನು ನೋಡಲೇಬೇಕು ಎಂದು ಸ್ನೇಹಿತರ ಜತೆ ಬಂದಿದ್ದೇನೆ. ನಾನು ಬೆಂಗಳೂರಿನಲ್ಲೇ ಕೆಲಸ ಮಾಡುತ್ತಿದ್ದು, ಇಂತಹ ಕ್ರೀಡೆ, ಇಲ್ಲಿನ ಸಂಸ್ಕೃತಿ, ಜನ, ಜಾಗವನ್ನು ತಿಳಿದಯಕೊಳ್ಳಲು ಸಹಾಯ ಮಾಡುತ್ತದೆ. ಕೋಣದ ಓಟವನ್ನು ನೋಡಲು ಬಹಳ ಖುಷಿಯಿದೆ. ಇದರೊಂದಿಗೆ ದಕ್ಷಿಣ ಕನ್ನಡ ಭಾಗದ ತಿಂಡಿ-ತಿನಿಸುಗಳು ಕೂಡ ಇಷ್ಟವಾಯಿತು’ ಎಂದು ಜರು ತಮ್ಮ ಅನುಭವವನ್ನು ಹಂಚಿಕೊಂಡರು.

ommnews

Recent Posts

ಹಿಂದೂ ಧರ್ಮರಕ್ಷಣೆಗಾಗಿ ಹಿಂದೂ ರಾಷ್ಟ್ರ ಸ್ಥಾಪನೆಯ ಅವಶ್ಯಕತೆ

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…

1 year ago

ಹಿಂದೂಗಳ ಜಾಗೃತಿಗಾಗಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿತ ಹಿಂದೂ ರಾಷ್ಟ್ರ-ಜಾಗೃತಿ ಸಭೆ !

ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…

1 year ago

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ !

ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…

1 year ago

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…

1 year ago

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿ

ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…

1 year ago